ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ 
ದೇಶ

ತಮಿಳುನಾಡು: ಗೋಲ್ಡನ್ ಬೆ ರೆಸಾರ್ಟ್ ಹೊರಗೆ ಭದ್ರತಾ ಸಿಬ್ಬಂದಿಯಿಂದ ಪತ್ರಕರ್ತರ ಮೇಲೆ ಹಲ್ಲೆ

ಎಐಎಡಿಎಂಕೆ ಶಾಸಕರು ಉಳಿದುಕೊಂಡಿದ್ದ ಗೋಲ್ಡನ್ ಬೆ ರೆಸಾರ್ಟ್ ಸಮೀಪ ಜಮಾಯಿಸಿದ್ದ ಪತ್ರಕರ್ತರ ಮೇಲೆ ಶಾಸಕರನ್ನು ಕಾಯುತ್ತಿರುವ ಸಿಬ್ಬಂದಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ...

ಚೆನ್ನೈ: ಎಐಎಡಿಎಂಕೆ ಶಾಸಕರು ಉಳಿದುಕೊಂಡಿದ್ದ ಗೋಲ್ಡನ್ ಬೆ ರೆಸಾರ್ಟ್ ಸಮೀಪ ಜಮಾಯಿಸಿದ್ದ ಪತ್ರಕರ್ತರ ಮೇಲೆ ಶಾಸಕರನ್ನು ಕಾಯುತ್ತಿರುವ ಸಿಬ್ಬಂದಿ ಹಲ್ಲೆ ನಡೆಸಿರುವ ಘಟನೆ ಕಳೆದ ರಾತ್ರಿ ನಡೆದಿದೆ.

ಕೆಲವು ಪತ್ರಕರ್ತರ ಕ್ಯಾಮರಾ ಮತ್ತು ಮೊಬೈಲ್ ಫೋನ್ ಗಳನ್ನು ಕೂಡ ಕಿತ್ತುಕೊಂಡಿದ್ದಾರೆ ಎಂದು ಪತ್ರಕರ್ತರು ತಿಳಿಸಿದ್ದಾರೆ.

ಮದ್ರಾಸ್ ಪತ್ರಕರ್ತರ ಸಂಘ ಮತ್ತು ತಮಿಳುನಾಡು ಪತ್ರಕರ್ತರ ಸಂಘಟನೆ, ಡಿಎಂಕೆ ನಾಯಕ ಎಂ.ಕೆ.ಸ್ಟಾಲಿನ್ ಘಟನೆಯನ್ನು ಖಂಡಿಸಿದ್ದಾರೆ.

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ಅವರು, ರೆಸಾರ್ಟ್ ನಲ್ಲಿ ಉಳಿದುಕೊಂಡಿದ್ದ 127 ಮಂದಿ ಶಾಸಕರನ್ನುದ್ದೇಶಿಸಿ ಮಾತನಾಡಲಿದ್ದರು. ಅವರು ರೆಸಾರ್ಟ್ ಗೆ ಬರುವ ಹಿನ್ನೆಲೆಯಲ್ಲಿ ಟಿವಿ ಮತ್ತು ಪತ್ರಿಕಾ ಮಾಧ್ಯಮದವರು ರೆಸಾರ್ಟ್ ಹೊರಗೆ ಸೇರಿದ್ದರು.

ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಉಸ್ತುವಾರಿ ಮುಖ್ಯಮಂತ್ರಿ  ಒ.ಪನ್ನೀರ್ ಸೆಲ್ವಂ, ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ರೆಸಾರ್ಟ್ ನಲ್ಲಿ ಉಳಿದುಕೊಂಡಿರುವ ಶಾಸಕರನ್ನು ಕಾಯುತ್ತಿರು ಭದ್ರತಾ ಸಿಬ್ಬಂದಿ ಪಕ್ಕದ ಗ್ರಾಮಕ್ಕೆ ತೆರಳುವ ಸಾರ್ವಜನಿಕ ರಸ್ತೆಯನ್ನು ಬ್ಲಾಕ್ ಮಾಡಿದ್ದು, ಇದಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಹೇಳಿಕೆ ಹೊರಡಿಸಿರುವ ಎಂ.ಕೆ.ಸ್ಟಾಲಿನ್, ಶಶಿಕಲಾ ಬಣದ ಎಐಎಡಿಎಂಕೆ ಕಾರ್ಯಕರ್ತರು ದುಷ್ಕೃತ್ಯಗಳನ್ನು ನಡೆಸುತ್ತಿದ್ದರೂ ಕೂಡ ಪೊಲೀಸರು ಏಕೆ ಸುಮ್ಮನೆ ಕುಳಿತಿದ್ದಾರೆ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಶಶಿಕಲಾ ಬಣದವರು ನಡೆಸಿದ ಪತ್ರಕರ್ತರ ಮೇಲಿನ ಹಲ್ಲೆಯನ್ನು ಅವರು ತೀವ್ರವಾಗಿ ಖಂಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

SCROLL FOR NEXT