ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ 
ದೇಶ

ಯುಇಎನಲ್ಲಿ 3 ಭಾರತೀಯರ ಸಾವು: ತನಿಖೆಗೆ ಆದೇಶಿಸಿದ ಸುಷ್ಮಾ ಸ್ವರಾಜ್

ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಸಾವನ್ನಪ್ಪಿದ್ದ ಮೂವರು ಭಾರತೀಯ ಪ್ರಕರಣವನ್ನು ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಸೋಮವಾರ ಆದೇಶಿಸಿದ್ದಾರೆ...

ನವದೆಹಲಿ: ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಸಾವನ್ನಪ್ಪಿದ್ದ ಮೂವರು ಭಾರತೀಯ ಪ್ರಕರಣವನ್ನು ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಸೋಮವಾರ ಆದೇಶಿಸಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಯುಇಎನ ಶರ್ಜಾಹ್ ನಲ್ಲಿರುವ ಕಚ್ಚಾ ತೈಲ ಸಂಗ್ರಹಾಗಾರದಲ್ಲಿ ಮೂವರು ಭಾರತೀಯರು ಸಾವನ್ನಪ್ಪಿದ್ದರು. ಮೂವರು ಭಾರತೀಯರು ಉಸಿರುಗಟ್ಟಿ ಸಾವನ್ನಪ್ಪಿದ್ದರು ಎಂದು ವರದಿಯಾಗಿತ್ತು. ಸಾವನ್ನಪ್ಪಿದ್ದ ಮೂವರು ಭಾರತೀಯರನ್ನು ಕಿಶಾನ್ ಸಿಂಗ್, ಮೋಹನ್ ಸಿಂಗ್ ಮತ್ತು ಉಜೇಂದ್ರ ಸಿಂಗ್ ಎಂದು ಗುರ್ತಿಸಲಾಗಿತ್ತು.

ಈ ಹಿನ್ನಲೆಯಲ್ಲಿ ಪ್ರಕರಣ ಸಂಬಂಧ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಸುಷ್ಮಾ ಸ್ವರಾಜ್ ಅವರು, ಮೃತರ ಕುಟುಂಬಕ್ಕೆ ಈ ಮೂಲಕ ಸಂತಾಪವನ್ನು ಸೂಚಿಸುತ್ತೇನೆ, ಮೃತರ ಕುಟುಂಬಕ್ಕೆ ಅಗತ್ಯವಿರುವ ಸಹಾಯ ಹಾಗೂ ಪರಿಹಾರವನ್ನು ನೀಡುತ್ತೇವೆಂದು ಹೇಳಿದ್ದಾರೆ.

ಪ್ರಕರಣ ಸಂಬಂಧ ಈಗಾಗಲೇ ತನಿಖೆಗೆ ಆದೇಶಿಸಲಾಗಿದೆ. ಭಾರತೀಯ ಅಧಿಕಾರಿಗಳು ಪ್ರಕರಣ ಕುರಿತು ತನಿಖೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.

ಖಾಸಗಿ ಮಾಧ್ಯಮವೊಂದು ವರದಿ ಮಾಡಿರುವ ಪ್ರಕಾರ, ಭಾರತೀಯ ಸಾವಿನ ಹಿಂದೆ ಕೆಲವರ ಕೈವಾಡವಿದ್ದು, ಈಗಾಗಲೇ ಶರ್ಜಾಹ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆಂದು ಹೇಳಿಕೊಂಡಿದೆ. ಅಲ್ಲದೆ, ಮೃತದೇಹಗಳನ್ನು ಶವಪರೀಕ್ಷೆಗೆ ಕಳುಹಿಸಲಾಗಿದೆ ಎಂದು ವರದಿ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್