ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು 
ದೇಶ

ಮತಾಂತರ ಹೇಳಿಕೆ; ಕಿರಣ್ ರಿಜಿಜು ಬೆನ್ನಿಗೆ ನಿಂತ ಬಿಜೆಪಿ

ಹಿಂದೂಗಳು ಎಂದಿಗೂ ಅನ್ಯ ಮತದವರನ್ನು ಮತಾಂತರ ಮಾಡುವುದಿಲ್ಲ. ಹೀಗಾಗಿಯೇ ಹಿಂದೂಗಳ ಸಂಖ್ಯೆ ಕ್ಷೀಣಿಸುತ್ತಿದೆ ಎಂದು ಹೇಳಿಕೆ ನೀಡಿ ವಿರೋಧ ಪಕ್ಷಗಳ ತೀವ್ರ ಟೀಕೆಗೆ ಒಳಗಾಗಿರುವ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಅವರ ಬೆನ್ನಿಗೆ...

ಮುಂಬೈ: ಹಿಂದೂಗಳು ಎಂದಿಗೂ ಅನ್ಯ ಮತದವರನ್ನು ಮತಾಂತರ ಮಾಡುವುದಿಲ್ಲ. ಹೀಗಾಗಿಯೇ ಹಿಂದೂಗಳ ಸಂಖ್ಯೆ ಕ್ಷೀಣಿಸುತ್ತಿದೆ ಎಂದು ಹೇಳಿಕೆ ನೀಡಿ ವಿರೋಧ ಪಕ್ಷಗಳ ತೀವ್ರ ಟೀಕೆಗೆ ಒಳಗಾಗಿರುವ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಅವರ ಬೆನ್ನಿಗೆ ಬಿಜೆಪಿ ಮಂಗಳವಾರ ಬಂದಿದೆ.

ಕಿರಣ್ ರಿಜಿಜು ಹೇಳಿಕೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯರಿ ಶೈನಾ ಎನ್.ಸಿ ಅವರು, ಇತರೆ ಧರ್ಮಗಳು ಆಮಿಷಗಳನ್ನು ಒಡ್ಡಿ ಜನರನ್ನು ಮತಾಂತರ ಮಾಡುತ್ತಿರುತ್ತವೆ. ಆದರೆ, ಹಿಂದೂಗಳು ಇತರ ಧರ್ಮೀಯರನ್ನು ಮತಾಂತರ ಮಾಡುವುದಿಲ್ಲ. ಹಿಂದೂಗಳು ಮತಾಂತರ ಮಾಡವುದಿಲ್ಲ ಎಂಬುದು ಸತ್ಯವಾದ ಮಾತು. ಕಿರಣ್ ರಿಜಿಜು ಅವರ ಹೇಳಿಕೆ ಸರಿಯಿದೆ. ಇದು ಐತಿಹಾಸಿಕವಾದ ವಿಚಾರವಾಗಿದ್ದು, ಸಾಮಾಜಿಕ ಚರ್ಚೆಯಾಗಿದೆ. ಹೇಳಿಕೆ ವೈಯಕ್ತಿಕ, ಸಮುದಾಯದ ವಿರುದ್ಧದ ದಾಳಿಯಲ್ಲ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅರುಣಾಚಲ ಪ್ರದೇಶವನ್ನು ಹಿಂದೂ ಬಹುಸಂಖ್ಯಾತ ರಾಜ್ಯವನ್ನಾಗಿಸಲು ಹೊರಟಿದ್ದಾರೆ ಎಂಬ ಕಾಂಗ್ರೆಸ್ ಆರೋಪಕ್ಕೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿದ್ದ ಕಿರಣ್ ರಿಜಿಜು ಅವರು, ಹಿಂದೂಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಏಕೆಂದರೆ ಹಿಂದೂಗಳು ಎಂದಿಗೂ ಅನ್ಯ ಮತದವರನ್ನು ಮತಾಂತರ ಮಾಡುವುದಿಲ್ಲ, ಆದ್ದರಿಂದಲೇ ಬೇರೆ ರಾಷ್ಟ್ರಗಳಲ್ಲಿ ಆಗದೇ ಇರುವ ರೀತಿ ನಮ್ಮಲ್ಲಿ ಅಲ್ಪಸಂಖ್ಯಾತರ ಸಂಖ್ಯೆ ಹೆಚ್ಚುತ್ತಿದೆ. ಕಾಂಗ್ರೆಸ್ ಈ ರೀತಿಯ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಬಾರದು. ಭಾರತ ಧರ್ಮ ನಿರಪೇಕ್ಷ ರಾಷ್ಟ್ರವಾಗಿದ್ದು, ಪ್ರತಿಯೊಂದು ಮತ, ಧರ್ಮದವರು ಶಾಂತಿ ಮತ್ತು ಸ್ವಾತಂತ್ರ್ಯವನ್ನು ಅನುಭವಿಸುವಂತಿರಬೇಕು ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT