ರೋಹಿತ್ ವೇಮುಲಾ 
ದೇಶ

ರೋಹಿತ್ ವೇಮುಲಾ ದಲಿತ ಅಲ್ಲ: ವರದಿ

ಕಳೆದ ವರ್ಷ ಆತ್ಮಹತ್ಯೆಗೆ ಶರಣಾದ ಹೈದರಾಬಾದ್ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ದಲಿತರಲ್ಲ ಮತ್ತು...

ಹೈದರಾಬಾದ್: ಕಳೆದ ವರ್ಷ ಆತ್ಮಹತ್ಯೆಗೆ ಶರಣಾದ ಹೈದರಾಬಾದ್ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ದಲಿತರಲ್ಲ ಮತ್ತು ಈ ಸಂಬಂಧ ಸಲ್ಲಿಸಲಾಗಿದ್ದ ಜಾತಿ ಪ್ರಮಾಣ ಪತ್ರ ಸಹ ನಕಲಿ ಎಂದು ಮಂಗಳವಾರ ಆಂಧ್ರಪ್ರದೇಶ ಸರ್ಕಾರ ವರದಿ ಸಲ್ಲಿಸಿದೆ. ಅಲ್ಲದೆ ಈ ಸಂಬಂಧ ಗುಂಟೂರು ಜಿಲ್ಲಾಧಿಕಾರಿ ಕಾಂತಿಲಾಲ್ ದಂಡೆ ಮೂಲಕ ವೇಮುಲಾ ಕುಟುಂಬಕ್ಕೆ ನೋಟಿಸ್ ನೀಡಿದ್ದು, 15 ದಿನದೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿದೆ.
ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ ಈ ಸಂಬಂಧ ಇಂದು ಅಂತಿಮ ವರದಿ ಸಲ್ಲಿಸಿದ್ದು, ರೋಹಿತ್ ವೇಮುಲ ದಲಿತ ವಿದ್ಯಾರ್ಥಿಯಲ್ಲ. ಆತ ಇತರೆ ಹಿಂದುಳಿದ ಜಾತಿಗೆ ಸೇರುತ್ತಾನೆ ಎಂದು ಸ್ಪಷ್ಟಪಡಿಸಿದೆ. ಅಲ್ಲದೆ, ವೇಮುಲಾ ದಲಿತ ವಿದ್ಯಾರ್ಥಿಯೆಂದು ಹೇಳಿ, ಅದಕ್ಕೆ ಪೂರಕವಾಗಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರವನ್ನು ನೀಡಿದ್ದ ರೋಹಿತ್ ತಾಯಿಗೆ ಗುಂಟೂರು ಜಿಲ್ಲಾಡಳಿತ ನೋಟಿಸ್ ಜಾರಿಗೊಳಿಸಿದೆ.
ವೇಮುಲ ಆತ್ಮಹತ್ಯೆ ಪ್ರಕರಣ ಆತ ದಲಿತ ವಿದ್ಯಾರ್ಥಿ ಎನ್ನುವ ಕಾರಣಕ್ಕಾಗಿಯೇ ಹೆಚ್ಚು ಸುದ್ದಿ ಮಾಡಿತ್ತು. ಆದರೆ, ಅದರ ಬೆನ್ನಲ್ಲೇ ಆತ ದಲಿತನಲ್ಲ ಎಂಬ ಕೂಗೂ ಕೇಳಿಬಂದಿತ್ತು. ಆದರೆ, ಆತನ ತಾಯಿ ರಾಧಿಕಾ ತಾವು ದಲಿತರು ಎಂದು ವಾದಿಸಿದ್ದರಲ್ಲದೆ ರೋಹಿತ್ ಪರಿಶಿಷ್ಠ ಜಾತಿ ಪ್ರಮಾಣ ಪತ್ರವನ್ನು ಬಿಡುಗಡೆಗೊಳಿಸಿದ್ದರು.
ಇದೀಗ, ಪರಿಶಿಷ್ಠಿ ಜಾತಿ ಪ್ರಮಾಣಪತ್ರವೇ ಸುಳ್ಳು ಎಂದು ಆಂಧ್ರಪ್ರದೇಶ ಸರ್ಕಾರ ಹೇಳಿದೆ. ಆದರೆ ಆತನ ಕುಟುಂಬ ಮಾತ್ರ ನ್ಯಾಯಕ್ಕಾಗಿ ಕಾನೂನು ಹೋರಾಟ ನಡೆಸಲು ಮುಂದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ