ಭದ್ರತೆಗಾಗಿ ಚೆನ್ನೈನಲ್ಲಿ ಪೊಲೀಸರ ನಿಯೋಜನೆ 
ದೇಶ

ಸುಪ್ರೀಂ ಕೋರ್ಟ್ ತೀರ್ಪು ಹಿನ್ನೆಲೆ: ತಮಿಳುನಾಡಿನಾದ್ಯಂತ ಭಾರೀ ಭದ್ರತೆ

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ಅವರ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಕೇಸಿಗೆ ಸಂಬಂಧಪಟ್ಟಂತೆ...

ಚೆನ್ನೈ:ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ಅವರ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಕೇಸಿಗೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ಮಂಗಳವಾರ ತೀರ್ಪು ಪ್ರಕಟಿಸುವ ಸಾಧ್ಯತೆಯಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ತಮಿಳುನಾಡಿನಾದ್ಯಂತ ತೀವ್ರ ಭದ್ರತೆ ಒದಗಿಸಲಾಗಿದೆ. 
ಚೆನ್ನೈನ ಶಶಿಕಲಾ ಅವರ ಪೊಯೆಸ್ ಗಾರ್ಡನ್ ನಿವಾಸದ ಹೊರಗೆ ತೀವ್ರ ಭದ್ರತೆ ಏರ್ಪಡಿಸಲಾಗಿದೆ. ಇನ್ನೊಂದೆಡೆ ಶಶಿಕಲಾ ಅವರು ಎಐಎಡಿಎಂಕೆ ಶಾಸಕರು ಉಳಿದುಕೊಂಡಿರುವ ಗೋಲ್ಡನ್ ಬೆ ರೆಸಾರ್ಟ್ ನಲ್ಲಿದ್ದಾರೆ ಎಂದು ಪಕ್ಷದ ಹಿರಿಯ ನಾಯಕ ಎಂ.  ತಂಬಿದುರೈ ಎಎನ್ಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಉಸ್ತುವಾರಿ ಮುಖ್ಯಮಂತ್ರಿ ಒ.ಪನ್ನೀರ್ ಸೆಲ್ವಂ ಅವರ ಗ್ರೀನ್ ವೇ ರಸ್ತೆ ಬಳಿ ಇರುವ ನಿವಾಸದ ಹೊರಗೆ ಹೆಚ್ಚುವರಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಅಲ್ಲದೆ ರಾಜಭವನ ಹಾಗೂ ಶಾಸಕರು ಉಳಿದುಕೊಂಡಿರುವ ಕೊವತೂರು ರೆಸಾರ್ಟ್ ಹೊರಗೆ ಕೂಡ ತೀವ್ರ ಭದ್ರತೆ ಕಲ್ಪಿಸಲಾಗಿದೆ.
ಜೆ.ಜಯಲಲಿತಾ ಅವರ ನಿಧನದ ನಂತರ ಮುಖ್ಯಮಂತ್ರಿ ಗಾದಿಗಾಗಿ ಉಸ್ತುವಾರಿ ಮುಖ್ಯಮಂತ್ರಿ ಒ.ಪನ್ನೀರ್ ಸೆಲ್ವಂ ವಿರುದ್ಧ ಹೋರಾಡುತ್ತಿರುವ ಶಶಿಕಲಾ ಅವರ ರಾಜಕೀಯ ಭವಿಷ್ಯ ಇಂದಿನ ಸುಪ್ರೀಂ ಕೋರ್ಟ್ ತೀರ್ಪು ಮೇಲೆ ನಿಂತಿದೆ. 
ಅಕ್ರಮ ಆಸ್ತಿ ಗಳಿಕೆ ಕೇಸಿನಡಿ ಜಯಲಲಿತಾ ಸೇರಿದಂತೆ ಶಶಿಕಲಾ ಮತ್ತು ಅವರ ಸಂಬಂಧಿಕರಾದ ವಿ.ಎನ್.ಸುಧಾಕರನ್, ಎಲವರಸಿ ಅವರನ್ನು  ಕರ್ನಾಟಕ ಹೈಕೋರ್ಟ್ ಖುಲಾಸೆಗೊಳಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

SCROLL FOR NEXT