ನವದೆಹಲಿ: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಇಂದು ತೀರ್ಪು ಪ್ರಕಟಿಸಿದ ಸುಪ್ರೀಂಕೋರ್ಟ್ ವಿಕೆ ಶಶಿಕಲಾ ಅಪರಾಧಿ ಎಂದು ಘೋಷಿಸಿದ್ದು ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಇಡೀ ದೇಶವೇ ಕಾತರದಿಂದ ನಿರೀಕ್ಷಿಸುತ್ತಿದ್ದ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ ಶಶಿಕಲಾ ನಟರಾಜನ್ ಅವರ ವಿರುದ್ಧದ ಅಕ್ರಮ ಆಸ್ತಿ ಪ್ರಕರಣದ ತೀರ್ಪನ್ನು ಸುಪ್ರೀಂ ಕೋರ್ಟ್ ನ ವಿಭಾಗೀಯ ಪೀಠದ ನ್ಯಾಯಮೂರ್ತಿಗಳಾದ ಪಿನಾಕಿ ಚಂದ್ರ ಘೋಷ್ ಮತ್ತು ಅಮಿತಾವ್ ರಾವ್ ಪ್ರಕಟಿಸಿದ್ದಾರೆ.
ಶಶಿಕಲಾಗೆ ನಾಲ್ಕು ವರ್ಷ ಜೈಲು ಶಿಕ್ಷೆ, 10 ಕೋಟಿ ರುಪಾಯಿ ದಂಡ ವಿಧಿಸಿರುವ ಸುಪ್ರೀಂಕೋರ್ಟ್ ಈ ಕೂಡಲೇ ಪೊಲೀಸರಿಗೆ ಶರಣಾಗುವಂತೆ ಸೂಚಿಸಿದೆ. ಈ ಮೂಲಕ ಶಶಿಕಲಾ ಇನ್ನು ನಾಲ್ಕು ವರ್ಷ ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿ ಶಿಕ್ಷೆ ಅನುಭವಿಸಲಿದ್ದಾರೆ.
ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರು ಆದಾಯ ಮೀರಿ ಆಸ್ತಿ ಪ್ರಕರಣದ ಮುಖ್ಯ ಆರೋಪಿಯಾಗಿದ್ದು ಅವರು ಮೃತಪಟ್ಟಿರುವುದರಿಂದ ಅವರನ್ನು ಪ್ರಕರಣದಿಂದ ಕೈಬಿಡಲಾಗಿದ್ದು, ಇನ್ನು ಎರಡನೇ ಆರೋಪಿ ಶಶಿಕಲಾ, ಮೂರನೇ ಆರೋಪಿ ಸುಧಾಕರನ್ ಮತ್ತು ನಾಲ್ಕನೇ ಆರೋಪಿ ಇಳವರಸಿ ಇದೀಗ ಜೈಲು ಸೆರಲಿದ್ದಾರೆ.
ಸುಪ್ರೀಂಕೋರ್ಟ್ ತೀರ್ಪು ಅನ್ವಯ ಇನ್ನು ಆರು ವರ್ಷಗಳ ಕಾಲ ಶಶಿಕಲಾ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ. ಜತೆಗೆ 10 ವರ್ಷಗಳ ಕಾಲ ಯಾವುದೇ ಸ್ಥಾನವನ್ನು ಅಲಂಕರಿಸುವಂತಿಲ್ಲ.
ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಶಶಿಕಲಾರನ್ನು ದೋಷಮುಕ್ತಗೊಳಿಸಿ ಕರ್ನಾಟಕ ಹೈಕೋರ್ಟ್ 2015ರಲ್ಲಿ ಆದೇಶ ನೀಡಿತ್ತು. ಇದನ್ನು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿತ್ತು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos