ಸುಪ್ರೀಂ ಕೋರ್ಟ್ 
ದೇಶ

ತ್ರಿವಳಿ ತಲಾಖ್: ಕಾನೂನು ಅಂಶ ನೋಡಲಾಗುವುದೇ ಹೊರತು ವಾಸ್ತವತೆಯನ್ನಲ್ಲ: ಸುಪ್ರೀಂ ಕೋರ್ಟ್

ಮುಸಲ್ಮಾನರಲ್ಲಿ ತ್ರಿವಳಿ ತಲಾಖ್, ನಿಕಾಹ್ ಹಲಾಲಾ ಮತ್ತು ಬಹುಪತ್ನಿತ್ವ ಪದ್ಧತಿಗಳ ಕಾನೂನು ಅಂಶಗಳನ್ನು...

ನವದೆಹಲಿ: ಮುಸಲ್ಮಾನರಲ್ಲಿ ತ್ರಿವಳಿ ತಲಾಖ್, ನಿಕಾಹ್ ಹಲಾಲಾ ಮತ್ತು ಬಹುಪತ್ನಿತ್ವ ಪದ್ಧತಿಗಳ ಕಾನೂನು ಅಂಶಗಳನ್ನು ನಿರ್ಧರಿಸುವುದಾಗಿ ಹೇಳಿರುವ ಸುಪ್ರೀಂ ಕೋರ್ಟ್, ಮುಸಲ್ಮಾನ ಕಾನೂನಿನಡಿಯಲ್ಲಿ ವಿಚ್ಚೇದನವನ್ನು ನ್ಯಾಯಾಲಯ ಮೇಲ್ವಿಚಾರಣೆ ನಡೆಸುವುದಿಲ್ಲ ಎಂದು ಹೇಳಿದೆ.
ನಮ್ಮ ಮೇಲೆ ಪರ್ಯಾಲೋಚನೆಗೆ ಬರುವ ವಿಷಯಗಳನ್ನು ನೀವು ಕುಳಿತು ಚರ್ಚೆ ಮಾಡಿ ತೀರ್ಮಾನಿಸಿ, ನ್ಯಾಯಾಲಯದ ಪರಿಗಣನೆಗೆ ಯಾವ ವಿಚಾರಗಳು ಬರುತ್ತವೆ ಎಂಬುದನ್ನು ನಾವು ತೀರ್ಮಾನಿಸುತ್ತೇವೆ ಎಂದು ಮುಖ್ಯ ನ್ಯಾಯಮೂರ್ತಿಗಳಾದ ಜೆ.ಎಸ್. ಖೇಹರ್ ಮತ್ತು ಎನ್.ವಿ.ರಮಣ ಹಾಗೂ ಡಿ.ವೈ.ಚಂದ್ರಚೂಡ್ ಅವರಿದ್ದ ನ್ಯಾಯಪೀಠ ಹೇಳಿದೆ.ನಿರ್ದಿಷ್ಟ ಕೇಸಿನ ವಾಸ್ತವಿಕ ಅಂಶಗಳನ್ನು ವ್ಯವಹರಿಸುವುದಿಲ್ಲ ಎಂದು ಸ್ಪಷ್ಟಪಡಿಸಿರುವ ನ್ಯಾಯಪೀಠ, ಕಾನೂನಾತ್ಮಕ ಅಂಶಗಳನ್ನು ನಿರ್ಧರಿಸುತ್ತದೆ ಎಂದು ತಿಳಿಸಿದೆ.
ಮುಸ್ಲಿಂ ವೈಯಕ್ತಿಕ ಕಾನೂನಿನಡಿ ವಿಚ್ಛೇದನವನ್ನು ಎರಡೂ ಕೋರ್ಟಿನಡಿ ಅಥವಾ ನ್ಯಾಯಾಲಯ ಮೇಲ್ವಿಚಾರಣೆ ಸಾಂಸ್ಥಿಕ ಪಂಚಾಯ್ತಿಯಡಿಯಲ್ಲಿ ಮೇಲ್ವಿಚಾರಣೆ ಮಾಡಬೇಕೆ ಎಂಬುದನ್ನು ನೋಡಬೇಕಿದೆ ಎಂದು ಹೇಳಿದೆ. 
ತ್ರಿವಳಿ ತಲಾಖ್ ಆಪಾದಿತ ಸಂತ್ರಸ್ತರಿಗೆ ಸಂಬಂಧಿಸಿದ ಪ್ರಕರಣಗಳನ್ನು ಸಲ್ಲಿಸುವಂತೆ ನ್ಯಾಯಾಲಯ ಹೇಳಿದೆ.
ಜಾತ್ಯತೀತತೆ ಮತ್ತು ಲಿಂಗ ಸಮಾನತೆ ದೃಷ್ಟಿಯಿಂದ ಮುಸಲ್ಮಾನರಲ್ಲಿ ತ್ರಿವಳಿ ತಲಾಖ್, ನಿಖಾಹ್ ಹಲಾಲ ಮತ್ತು ಬಹುಪತ್ನಿತ್ವ ಪದ್ಧತಿಯನ್ನು ವಿರೋಧಿಸಿದ್ದ ಕೇಂದ್ರ ಸರ್ಕಾರ ಈ ವಿಷಯವನ್ನು ಮರು ಅವಲೋಕನ ಮಾಡುವಂತೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು.
ಆದರೆ ಕೇಂದ್ರದ ನಿಲುವನ್ನು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ವಿರೋಧಿಸಿದೆ. ಲಿಂಗ ತಾರತಮ್ಯವನ್ನು ತಳ್ಳಿ ಹಾಕಿರುವ ಅದು ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ಯಾರಿಗೂ ಮಧ್ಯ ಪ್ರವೇಶಕ್ಕೆ ಅವಕಾಶವಿಲ್ಲ ಎಂದು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT