ಮರೀನಾ ಬೀಚ್ ನಲ್ಲಿರುವ ಜಯಲಲಿತಾ ಅವರ ಸಮಾಧಿಗೆ ಶ್ರದ್ಧಾಂಜಲಿ ಸಲ್ಲಿಸಿದ ದೀಪಾ ಜಯಕುಮಾರ್ 
ದೇಶ

ತ.ನಾಡು ರಾಜಕೀಯ ಬಿಕ್ಕಟ್ಟು: ಪನ್ನೀರ್'ಸೆಲ್ವಂಗೆ ಹೆಚ್ಚಿದ ಬೆಂಬಲ

ವಿ.ಕೆ. ಶಶಿಕಲಾ ಅವರ ವಿರುದ್ಧ ಸುಪ್ರೀಂಕೋರ್ಟ್ ತೀರ್ಪು ಪ್ರಕಟಿಸುತ್ತಿದ್ದಂತೆಯೇ ತಮಿಳುನಾಡಿನ ರಾಜ್ಯ ರಾಜಕೀಯ ಮಹತ್ದದ ತಿರುವು ಪಡೆದುಕೊಂಡಿದೆ...

ಚೆನ್ನೈ: ವಿ.ಕೆ. ಶಶಿಕಲಾ ಅವರ ವಿರುದ್ಧ ಸುಪ್ರೀಂಕೋರ್ಟ್ ತೀರ್ಪು ಪ್ರಕಟಿಸುತ್ತಿದ್ದಂತೆಯೇ ತಮಿಳುನಾಡಿನ ರಾಜ್ಯ ರಾಜಕೀಯ ಮಹತ್ದದ ತಿರುವು ಪಡೆದುಕೊಂಡಿದೆ.

ಶಶಿಕಲಾ ಅವರನ್ನು ದೋಷಿ ಎಂದು ಸುಪ್ರೀಂ ಆದೇಶಿಸಿದ ಬೆನ್ನಲ್ಲೇ ಹಂಗಾಮಿ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಅವರಿಗೆ ಬೆಂಬಲಗಳು ಹೆಚ್ಚಾಗ ತೊಡಗಿದ್ದು, ನಿನ್ನೆಯಷ್ಟೇ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಸಂಬಂಧಿ ದೀಪಾ ಜಯಕುಮಾರ್ ಅವರು ಪನ್ನೀರ್ ಸೆಲ್ವಂ ಅವರಿಗೆ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.

ಪನ್ನೀರ್ ಸೆಲ್ವಂ ಅವರನ್ನು ಭೇಟಿಯಾದ ದೀಪಾ ಜಯಕುಮಾರ್ ಅವರು ಮೊದಲಿಗೆ ಮರೀನಾ ಬೀಚ್ ನಲ್ಲಿರುವ ಜಯಲಲಿತಾ ಅವರ ಸಮಾಧಿ ಬಳಿ ಹೋಗಿ ಶ್ರದ್ಧಾಂಜಲಿ ಸಲ್ಲಿಸಿದರು. ನಂತರ ಪನ್ನೀರ್ ಸೆಲ್ವಂ ಅವರ ನಿವಾಸಕ್ಕೆ ತೆರಳಿದರು. ಈ ವೇಳೆ ಸೆಲ್ವಂ ಅವರ ಪತ್ನಿ ದೀಪಾ ಅವರನ್ನು ದೀಪ ಬೆಳಗುವ ಮೂಲಕ ಸ್ವಾಗತಿಸಿದರು.

ನಂತರ ಪನ್ನೀರ್ ಸೆಲ್ವಂ ಅವರಿಗೆ ತಮ್ಮ ಬೆಂಬಲ ಸೂಚಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ದೀಪಾ ಜಯಕುಮಾರ್ ಅವರು, ಇಡೀ ರಾಜ್ಯವನ್ನು ತಮ್ಮ ಹಿಡಿತದಲ್ಲಿಟ್ಟುಕೊಳ್ಳಲು ಯತ್ನಿಸುತ್ತಿದ್ದ ಕುಟುಂಬದ ವಿರುದ್ಧ ತೀರ್ಪು ಬಂದಿದೆ. ಭ್ರಷ್ಟಾಚಾರದ ಹಿಂದಿರುವವರೆಲ್ಲರೂ ಶಿಕ್ಷೆ ಅನುಭವಿಸಲೇಬೇಕು. ಈ ಹಿಂದೆ ನಾನು ಫೆಬ್ರವರಿ 24 ರಿಂದ ರಾಜಕೀಯ ಪ್ರಯಾಣವನ್ನು ಆರಂಭಿಸಲಿದ್ದೇನೆಂದು ಎಂದು ಹೇಳಿದ್ದೆ. ಆದರೆ, ಇಂದಿನಿಂದಲೇ ನನ್ನ ರಾಜಕೀಯ ಪ್ರಯಾಣ ಆರಂಭವಾಗುತ್ತಿದೆ. ಪಳನಿಸ್ವಾಮಿ ಅವರನ್ನು ಶಾಸಕಾಂಗ ಪಕ್ಷದ ನಾಯಕನ್ನಾಗಿ ಆಯ್ಕೆ ಮಾಡಿರುವುದು ಸರಿಯಲ್ಲ. ಅವರಿಗೆ ಜಯಲಲಿತಾ ಬೆಂಬಲ ಇರಲಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT