ಸಾಂದರ್ಭಿಕ ಚಿತ್ರ 
ದೇಶ

ಡ್ಯಾನ್ಸ್ ಮಾಡಲು ನಿರಾಕರಿಸಿದ ಸ್ನೇಹಿತನನ್ನು ಕೊಂದ ಗೆಳೆಯ

ಹುಟ್ಟುಹಬ್ಬ ಸಮಾರಂಭದಲ್ಲಿ ಡ್ಯಾನ್ಸ್ ಮಾಡಲು ನಿರಾಕರಿಸಿದ ತನ್ನ ಸ್ನೇಹಿತನನ್ನೇ ವ್ಯಕ್ತಿಯೊಬ್ಬ ಕೊಲೆ ಮಾಡಿರುವ ಘಟನೆ ಮುಂಬಯಿಯಲ್ಲಿ ...

ಮುಂಬಯಿ: ಹುಟ್ಟುಹಬ್ಬ ಸಮಾರಂಭದಲ್ಲಿ ಡ್ಯಾನ್ಸ್ ಮಾಡಲು ನಿರಾಕರಿಸಿದ ತನ್ನ ಸ್ನೇಹಿತನನ್ನೇ ವ್ಯಕ್ತಿಯೊಬ್ಬ ಕೊಲೆ ಮಾಡಿರುವ ಘಟನೆ ಮುಂಬಯಿಯಲ್ಲಿ ನಡೆದಿದೆ.

ನಿನ್ನೆ ರಾತ್ರಿ ಕೇತನ್ ಶಿರ್ವಾಡ್ಕರ್ ಎಂಬಾತನ ಹುಟ್ಟುಹಬ್ಬದ ಪಾರ್ಟಿ ಇತ್ತು. ಪಾರ್ಟಿಗೆ ಸ್ನೇಹಿತರು ಆಗಮಿಸಿದ್ದರು. ಅನುಷ್ಕ್ ಜಾದವ್ ಎಂಬ ಸ್ನೇಹಿತನು ಬಂದಿದ್ದ, ಈ ವೇಳೆ ಹಾಡು ಹಾಕಿದ ಕೇತನ್ ಡ್ಯಾನ್ಸ್ ಮಾಡುವಂತೆ ಅನುಷ್ಕ್ ಜಾದವ್ ಗೆ ಹೇಳಿದ್ದಾನೆ, ಆದರೆ ಡ್ಯಾನ್ಸ್ ಮಾಡಲು ಜಾದವ್ ನಿರಾಕರಿಸಿದ್ದಾನೆ.

ಇಬ್ಬರು ಕೂಡ ಕುಡಿತ ಮತ್ತಿನಲ್ಲಿದ್ದರು. ಈ ವೇಳೆ ಪರಸ್ಪರ ಜಗಳ ಮಾಡಿಕೊಂಡು ಒಬ್ಬರನ್ನೊಬ್ಬರು ಥಳಿಸಿದ್ದಾರೆ. ಅಲ್ಲಿದ್ದ ಬೇರೆ ಸ್ನೇಹಿತರು ಜಗಳ ಬಿಡಿಸಲು ಯತ್ನಿಸಿ ಇಬ್ಬರನ್ನು ಬೇರ್ಪಡಿಸಿದ್ದರು. ಈ ವೇಳೆ ಕೇತನ್ ಮರದ ಹಲಗೆಯಿಂದ ಜಾದವ್ ತಲೆಗೆ ಹೊಡೆದಿದ್ದಾನೆ.

ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಜಾಧವ್ ಸಾವನ್ನಪ್ಪಿದ್ದಾನೆ ಎಂದು ಮುಂಬಯಿ ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಆರೋಪಿ ಕೇತನ್ ನನ್ನು ಪೊಲೀಸರು ಬಂಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT