ಸಾಂದರ್ಭಿಕ ಚಿತ್ರ 
ದೇಶ

ಡ್ಯಾನ್ಸ್ ಮಾಡಲು ನಿರಾಕರಿಸಿದ ಸ್ನೇಹಿತನನ್ನು ಕೊಂದ ಗೆಳೆಯ

ಹುಟ್ಟುಹಬ್ಬ ಸಮಾರಂಭದಲ್ಲಿ ಡ್ಯಾನ್ಸ್ ಮಾಡಲು ನಿರಾಕರಿಸಿದ ತನ್ನ ಸ್ನೇಹಿತನನ್ನೇ ವ್ಯಕ್ತಿಯೊಬ್ಬ ಕೊಲೆ ಮಾಡಿರುವ ಘಟನೆ ಮುಂಬಯಿಯಲ್ಲಿ ...

ಮುಂಬಯಿ: ಹುಟ್ಟುಹಬ್ಬ ಸಮಾರಂಭದಲ್ಲಿ ಡ್ಯಾನ್ಸ್ ಮಾಡಲು ನಿರಾಕರಿಸಿದ ತನ್ನ ಸ್ನೇಹಿತನನ್ನೇ ವ್ಯಕ್ತಿಯೊಬ್ಬ ಕೊಲೆ ಮಾಡಿರುವ ಘಟನೆ ಮುಂಬಯಿಯಲ್ಲಿ ನಡೆದಿದೆ.

ನಿನ್ನೆ ರಾತ್ರಿ ಕೇತನ್ ಶಿರ್ವಾಡ್ಕರ್ ಎಂಬಾತನ ಹುಟ್ಟುಹಬ್ಬದ ಪಾರ್ಟಿ ಇತ್ತು. ಪಾರ್ಟಿಗೆ ಸ್ನೇಹಿತರು ಆಗಮಿಸಿದ್ದರು. ಅನುಷ್ಕ್ ಜಾದವ್ ಎಂಬ ಸ್ನೇಹಿತನು ಬಂದಿದ್ದ, ಈ ವೇಳೆ ಹಾಡು ಹಾಕಿದ ಕೇತನ್ ಡ್ಯಾನ್ಸ್ ಮಾಡುವಂತೆ ಅನುಷ್ಕ್ ಜಾದವ್ ಗೆ ಹೇಳಿದ್ದಾನೆ, ಆದರೆ ಡ್ಯಾನ್ಸ್ ಮಾಡಲು ಜಾದವ್ ನಿರಾಕರಿಸಿದ್ದಾನೆ.

ಇಬ್ಬರು ಕೂಡ ಕುಡಿತ ಮತ್ತಿನಲ್ಲಿದ್ದರು. ಈ ವೇಳೆ ಪರಸ್ಪರ ಜಗಳ ಮಾಡಿಕೊಂಡು ಒಬ್ಬರನ್ನೊಬ್ಬರು ಥಳಿಸಿದ್ದಾರೆ. ಅಲ್ಲಿದ್ದ ಬೇರೆ ಸ್ನೇಹಿತರು ಜಗಳ ಬಿಡಿಸಲು ಯತ್ನಿಸಿ ಇಬ್ಬರನ್ನು ಬೇರ್ಪಡಿಸಿದ್ದರು. ಈ ವೇಳೆ ಕೇತನ್ ಮರದ ಹಲಗೆಯಿಂದ ಜಾದವ್ ತಲೆಗೆ ಹೊಡೆದಿದ್ದಾನೆ.

ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಜಾಧವ್ ಸಾವನ್ನಪ್ಪಿದ್ದಾನೆ ಎಂದು ಮುಂಬಯಿ ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಆರೋಪಿ ಕೇತನ್ ನನ್ನು ಪೊಲೀಸರು ಬಂಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT