ಬಿಪಿನ್ ರಾವತ್ 
ದೇಶ

ಸೇನಾ ಕಾರ್ಯಾಚರಣೆಗೆ ಅಡ್ಡಿ ಪಡಿಸಿದರೆ ಉಗ್ರರ ಕಾರ್ಯಕರ್ತರೆಂದು ಪರಿಗಣನೆ: ಸೇನಾ ಮುಖ್ಯಸ್ಥರು

ಸೇನೆ ನಡೆಸುವ ಉಗ್ರ ವಿರೋಧಿ ಕಾರ್ಯಾಚರಣೆಗಳಿಗೆ ಭಾರತೀಯ ಸೇನಾ ಮುಖ್ಯಸ್ಥರು ಕಠಿಣ ಸಂದೇಶ ರವಾನೆ ಮಾಡಿದ್ದು, ಕಾರ್ಯಾಚರಣೆಗೆ ಅಡ್ಡಿ ಪಡಿಸುವವರನ್ನೂ ಉಗ್ರರ ಕಾರ್ಯಕರ್ತರೆಂದು ಪರಿಗಣಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ನವದೆಹಲಿ: ಸೇನೆ ನಡೆಸುವ ಉಗ್ರ ವಿರೋಧಿ ಕಾರ್ಯಾಚರಣೆಗಳಿಗೆ ಅಡ್ಡಿ ಪಡಿಸುವವರಿಗೆ ಭಾರತೀಯ ಸೇನಾ ಮುಖ್ಯಸ್ಥರು ಕಠಿಣ ಸಂದೇಶ ರವಾನೆ ಮಾಡಿದ್ದು, ಕಾರ್ಯಾಚರಣೆಗೆ ಅಡ್ಡಿ ಪಡಿಸುವವರನ್ನೂ ಉಗ್ರರ ಕಾರ್ಯಕರ್ತರೆಂದು ಪರಿಗಣಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. 
ಕಾಶ್ಮೀರದಲ್ಲಿ ನಡೆದ ಉಗ್ರ ವಿರೋಧಿ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಯೋಧರಿಗೆ ಶ್ರಧಾಂಜಲಿ ಸಲ್ಲಿಸಿದ ಬಳಿಕ ಮಾತನಾಡಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್, ಕಾರ್ಯಾಚರಣೆ ವೇಳೆ ಸ್ಥಳೀಯರು ವಿರೋಧ ವ್ಯಕ್ತಪಡಿಸುವುದರಿಂದ ಭದ್ರತಾ ಸಿಬ್ಬಂದಿಗಳ ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಸ್ಥಳೀಯರು ಭಯೋತ್ಪಾದಕರಿಗೆ ತಪ್ಪಿಸಿಕೊಳ್ಳಲು ನೆರವು ಮಾಡಿಕೊಡುವಂತಹ ಘಟನೆಗಳೂ ನಡೆಯುತ್ತಿವೆ. ಸ್ಥಳೀಯ ಯುವಕರು ಪಾಕಿಸ್ತಾನ, ಐಎಸ್ಐಎಸ್ ಧ್ವಜಗಳನ್ನು ಹಿಡಿದು ಸೇನಾ ಕಾರ್ಯಾಚರಣೆಗೆ ಅಡ್ಡಿ ಪಡಿಸಿದರೆ ಮುಲಾಜಿಲ್ಲದೇ ಅವರನ್ನು ರಾಷ್ಟ್ರದ್ರೋಹಿ, ಭಯೋತ್ಪಾದಕರ ಕಾರ್ಯಕರ್ತರೆಂದು ಪರಿಗಣಿಸಲಾಗುತ್ತದೆ ಎಂದು ಎಚ್ಚರಿಸಿದ್ದಾರೆ. 
"ಇಂದು ಅಂತಹ ಭಯೋತ್ಪಾದಕರ ಬೆಂಬಲಿಗರು ತಪ್ಪಿಸಿಕೊಳ್ಳಬಹುದು ಆದರೆ ಅವರನ್ನು ಶಾಶ್ವತವಾಗಿ ತಪ್ಪಿಸಿಕೊಳ್ಳುವುದಕ್ಕೆ ಬಿಡುವುದಿಲ್ಲ. ಕಾಶ್ಮೀರದಲ್ಲಿ ಭಾರತೀಯ ಸೇನೆಯ ಉಗ್ರ ವಿರೋಧಿ ಕಾರ್ಯಾಚರಣೆ ಮುಂದುವರೆಯಲಿದೆ. ಒಂದು ವೇಳೆ ಸ್ಥಳೀಯ ಯುವಕರು ಉಗ್ರರಿಗೆ ಬೆಂಬಲ ನೀಡುವುದನ್ನು ಮುಂದುವರೆಸಿದರೆ ಸೇನೆ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಬಿಪಿನ್ ರಾವತ್ ಕಠಿಣ ಎಚ್ಚರಿಕೆ ರವಾನಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT