ಶಶಿಕಲಾ 
ದೇಶ

ಪಕ್ಷದ ಚಟುವಟಿಕೆಗಳನ್ನು ಸದಾ ಗಮನಿಸುತ್ತಿರುತ್ತೇನೆ: ನಿಷ್ಠ ಶಾಸಕರಿಗೆ ಶಶಿಕಲಾ ಅಭಯ

ನಾನು ಎಲ್ಲಿದ್ದರೂ ಪಕ್ಷದ ಚಟುವಟಿಕೆಗಳನ್ನು ಸದಾ ಗಮನಿಸುತ್ತಾ ಇರುತ್ತೇನೆ ಎಂದು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ...

ಚೆನ್ನೈ: ನಾನು ಎಲ್ಲಿದ್ದರೂ ಪಕ್ಷದ ಚಟುವಟಿಕೆಗಳನ್ನು ಸದಾ ಗಮನಿಸುತ್ತಾ ಇರುತ್ತೇನೆ ಎಂದು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ಹೇಳಿದ್ದಾರೆ.

ಅಕ್ರಮ ಆಸ್ತಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತೀರ್ಪಿನ ನಂತರ ತನ್ನ ನಿಷ್ಠಾವಂತ ಶಾಸಕರನ್ನು ಉದ್ದೇಶಿಸಿ ಮಾತನಾಡಿದ ಶಶಿಕಲಾ, ಭವಿಷ್ಯದಲ್ಲಿ ಪಕ್ಷದ ಗತಿಯೇನು ಎಂದು ಶಾಸಕರ ಪ್ರಶ್ನೆಗೆ ಉತ್ತಿರಿಸಿದ ಅವರು ನೀವೆಲ್ಲಾ ಒಗ್ಗಟ್ಟಾಗಿದ್ದಾರೆ ನನಗೆ ಯಾವುದೇ ಚಿಂತೆಯಿಲ್ಲ, ನಾನು ಶಿಕ್ಷೆಗೊಳಗಾಗಿ ಜೈಲು ಸೇರಬಹುದು ಆದರೇ ನನ್ನ ಮನಸ್ಸನ್ನು ಯಾರು ಬಂಧಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಎಐಎಡಿಎಂಕೆಯಿಂದ ನನ್ನನ್ನು ಬೇರ್ಪಡಿಸಲು ಯಾವುದೇ ಶಕ್ತಿಗೆ ಸಾಧ್ಯವಿಲ್ಲ,  ನಾನು ಎಲ್ಲೇ ಇರಲಿ, ರಾಜ್ಯದಲ್ಲಿರಲಿ ಅಥವಾ ಹೊರರಾಜ್ಯದಲ್ಲಿರಲಿ, ನನ್ನ ಯೋಚವೆಗಳು ಯಾವಾಗಲೂ ಪಕ್ಷದ ಬಗ್ಗೆಯೇ ಇರುತ್ತವೆ ಎಂದು ಶಶಿಕಲಾ ಹೇಳಿದ್ದಾರೆ.

ನೀವೆಲ್ಲರೂ ಒಗ್ಗಟ್ಟಾಗಿ ಇರಬೇಕಾದ ಪರಿಸ್ಥಿತಿ ಇದಾಗಿದೆ. ಮುಂದಿನ ಸರ್ಕಾರ ರಚನೆಗಾಗಿ ನೀವೆಲ್ಲಾ ಒಟ್ಟಿಗೆ ಇರಬೇಕು ಎಂದು ಶಾಸಕರಿಗೆ ಶಶಿಕಲಾ ಸೂಚಿಸಿದ್ದಾರೆ.

ಬೇರೆ ಕ್ಯಾಂಪ್ ಗೆ ವಿವಿದೆಡೆಯಿಂದ ಬೆಂಬಲ ಸಿಗಬಹುದು, ಆದರೆ ನಾವು ಮಾತ್ರ ಶಾಸಕರಿಗೆ ಬೆಂಬಲ ಸೂಚಿಸಬೇಕು. ಹಲವು ದಿನಗಳಿಂದ ನಾವು ತಾಳ್ಮೆಯಿಂದ ಇದ್ದೇವೆ, ರಾಜ್ಯಪಾಲರು ಶೀಘ್ರವೇ ನಮ್ಮನ್ನು ಸರ್ಕಾರ ರಚಿಸಲು ಆಹ್ವಾನಿಸುತ್ತಾರೆ ಎಂದು ಶಶಿಕಲಾ ಶಾಸಕರಿಗೆ ಅಭಯ ಹಸ್ತ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT