ತಮಿಳುನಾಡು ರಾಜ್ಯಪಾಲ ಸಿ.ವಿದ್ಯಾಸಾಗರ್ ರಾವ್ ಅವರನ್ನು ನಿನ್ನೆ ಭೇಟಿ ಮಾಡಿದ ಶಶಿಕಲಾ ಬಣದ ನಿಷ್ಠಾವಂತ ಇ.ಪಳನಿಸ್ವಾಮಿ. 
ದೇಶ

ಅಂತಿಮ ಘಟ್ಟದತ್ತ ತ.ನಾಡು ರಾಜಕೀಯ ಬಿಕ್ಕಟ್ಟು: ರಾಜ್ಯಪಾಲರಿಂದ ಪಳನಿ ಸ್ವಾಮಿಗೆ ಕರೆ!

ತಮಿಳುನಾಡಿನ ಮುಂದಿನ ಮುಖ್ಯಮಂತ್ರಿ ಯಾರಾಗಬೇಕೆಂದು ರಾಜ್ಯಪಾಲ ಸಿ.ವಿದ್ಯಾಸಾಗರ್ ರಾವ್...

ಚೆನ್ನೈ: ತಮಿಳುನಾಡಿನ ಮುಂದಿನ ಮುಖ್ಯಮಂತ್ರಿ ಯಾರಾಗಬೇಕೆಂದು ರಾಜ್ಯಪಾಲ ಸಿ.ವಿದ್ಯಾಸಾಗರ್ ರಾವ್ ಗುರುವಾರ ಅಪರಾಹ್ನ ತೀರ್ಮಾನ ಮಾಡುವ ನಿರೀಕ್ಷೆಯಿದೆ.
ಇಂದು ಮಧ್ಯಾಹ್ನ 11.30ಕ್ಕೆ ತಮ್ಮನ್ನು ಭೇಟಿ ಮಾಡುವಂತೆ ವಿ.ಕೆ.ಶಶಿಕಲಾ ಅವರ ನಿಷ್ಠಾವಂತ ಇ.ಪಳನಿಸ್ವಾಮಿಗೆ ರಾಜ್ಯಪಾಲರು ಆಹ್ವಾನ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. 
ಎಐಎಡಿಎಂಕೆಯಲ್ಲಿ ಶಶಿಕಲಾ ಬಣ ಮತ್ತು ಪನ್ನೀರ್ ಸೆಲ್ವಂ ಬಣ ಎಂದು ಎರಡು ಬಣಗಳು ಉಂಟಾಗಿದ್ದು, ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಏರ್ಪಟ್ಟಿರುವುದು ಈಗಾಗಲೇ ರಾಜ್ಯಪಾಲರ ಗಮನಕ್ಕೆ ಬಂದಿದೆ.
ಕಳೆದ ರಾತ್ರಿ ಪಳನಿಸ್ವಾಮಿ ರಾಜ್ಯಪಾಲರನ್ನು ಭೇಟಿ ಮಾಡಿ ತಮಗೆ 124 ಶಾಸಕರ ಬೆಂಬಲವಿದೆ ಎಂದು ತೋರಿಸಿದ್ದರು. ನಂತರ ಉಸ್ತುವಾರಿ ಮುಖ್ಯಮಂತ್ರಿ ಒ.ಪನ್ನೀರ್ ಸೆಲ್ವಂ ಅವರನ್ನು ಪಳನಿಸ್ವಾಮಿ ಭೇಟಿ ಮಾಡಿದ್ದರು. ಪನ್ನೀರ್ ಸೆಲ್ವಂಗೆ ಸದ್ಯ 11 ಶಾಸಕರ ಬೆಂಬಲವಿದ್ದು, ಚೆನ್ನೈ ಹತ್ತಿರದ ರೆಸಾರ್ಟ್ ನಿಂದ ಬಿಡುಗಡೆಯಾದರೆ ಇನ್ನಷ್ಟು ಶಾಸಕರು ತಮ್ಮತ್ತ ಬರುತ್ತಾರೆ ಎಂದು ರಾಜ್ಯಪಾಲರಿಗೆ ವಿವರಿಸಿದ್ದಾರೆ.
ಒಟ್ಟು 135 ಶಾಸಕರಲ್ಲಿ 124 ಶಾಸಕರು ಪಳನಿಸ್ವಾಮಿಯವರ ಕಡೆಗೆ ಸೇರಿದ್ದಾರೆ. ಶಶಿಕಲಾ ನಿಷ್ಠಾವಂತ ಶಾಸಕರು ಸತತ 9ನೇ ದಿನವಾದ ಇಂದು ಕೂಡ ಮಹಾಬಲಿಪುರಂನ ಗೋಲ್ಡನ್ ಬೆ ರೆಸಾರ್ಟ್ ನಲ್ಲಿಯೇ ಉಳಿದುಕೊಂಡಿದ್ದಾರೆ. 
ಇನ್ನೊಂದು ಮೂಲದ ಪ್ರಕಾರ, ವಿಧಾನಸಭೆಯಲ್ಲಿ ಪಳನಿಸ್ವಾಮಿ ಮತ್ತು ಪನ್ನೀರ್ ಸೆಲ್ವಂಗೆ ರಾಜ್ಯಪಾಲರು ಬಹುಮತ ಸಾಬೀತು ಪಡಿಸಲು ಅವಕಾಶ ನೀಡುವ ಸಾಧ್ಯತೆ ಹೆಚ್ಚಾಗಿದೆ ಎನ್ನುತ್ತವೆ. ಶಾಸಕರು ಮತದಾನದ ಮೂಲಕ ತಮ್ಮ  ನಾಯಕನನ್ನು ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯ ನೀಡುವ ಸಾಧ್ಯತೆಗಳಿವೆ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT