ರಾಹುಲ್ ಗಾಂಧಿ 
ದೇಶ

ಮನ್ ಕಿ ಬಾತ್ ನಿಲ್ಲಿಸಿ, ಜನರ ಮಾತನ್ನು ಕೇಳಿ: ಮೋದಿಗೆ ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಮನ್ ಕಿ ಬಾತ್ ನ್ನು ನಿಲ್ಲಿಸಿ ಜನತೆಯ ಮಾತನ್ನು ಕೇಳಬೇಕೆಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಉತ್ತರ ಪ್ರದೇಶ: ಪ್ರಧಾನಿ ನರೇಂದ್ರ ಮೋದಿ ಮನ್ ಕಿ ಬಾತ್ ನ್ನು ನಿಲ್ಲಿಸಿ ಜನತೆಯ ಮಾತನ್ನು ಕೇಳಬೇಕೆಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. 
ನೋಟು ನಿಷೇಧದಿಂದ ಜನರು ಎದುರಿಸುತ್ತಿರುವ ಸಂಕಷ್ಟವನ್ನು ಪ್ರಧಾನಿ ನರೇಂದ್ರ ಮೋದಿ ಆಲಿಸಬೇಕು ಎಂದು ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ. ಉತ್ತರ ಪ್ರದೇಶದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿರುವ ರಾಹುಲ್ ಗಾಂಧಿ, ರೈತರ ಸಾಲ ಮನ್ನ ಮಾಡದೇ ಇರುವುದಕ್ಕೆ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 
"ನಿನ್ನೆ ನಡೆದ ಸಭೆಯಲ್ಲಿ ಒಂದಷ್ಟು ಜನರು ನೋಟು ನಿಷೇಧದ ಬಗ್ಗೆ ಧ್ವನಿ ಎತ್ತಿದ್ದರು. ಅವರ ಸಮಸ್ಯೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಎಂದಾದರೂ ಕೇಳಿದ್ದಾರಾ? ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮನ್ ಕಿ ಬಾತ್ ನಿಲ್ಲಿಸಿ ಜನರ ಸಮಸ್ಯೆಗಳನ್ನು ಆಲಿಸಬೇಕೆಂದು ರಾಹುಲ್ ಗಾಂಧಿ ಹೇಳಿದ್ದಾರೆ. 
ರೈತರ ಸಾಲ ಮನ್ನಾ ಮಾಡಲು ನಿಮಗೆ ಉತ್ತರ ಪ್ರದೇಶದಲ್ಲಿ ಅಧಿಕಾರ ಬೇಕಿಲ್ಲ. ಕೇಂದ್ರದಲ್ಲಿ ನಿಮ್ಮ ಸರ್ಕಾರವೇ ಅಧಿಕಾರದಲ್ಲಿದೆ, ಈಗಲೇ ರೈತರ ಸಾಲ ಮನ್ನಾ ಮಾಡಿ ಎಂದು ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT