ದೆಹಲಿ ಬಿಜೆಪಿ ಮುಖ್ಯಸ್ಥ ಮನೋಜ್ ತಿವಾರಿ 
ದೇಶ

ಕಾರಿನ ಮೇಲೆ ದಾಳಿ: ವಿಪಕ್ಷಗಳ ವಿರುದ್ದ ಹರಿಹಾಯ್ದ ಮನೋಜ್ ತಿವಾರಿ

ಕಾರಿನ ಮೇಲೆ ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿಯವರು ವಿರೋಧ ಪಕ್ಷಗಳ ವಿರುದ್ಧ ಶುಕ್ರವಾರ ತೀವ್ರವಾಗಿ ಕಿಡಿಕಾರಿದ್ದಾರೆ...

ಮುಂಬೈ: ಕಾರಿನ ಮೇಲೆ ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಬಿಜೆಪಿ ಮುಖ್ಯಸ್ಥ ಮನೋಜ್ ತಿವಾರಿಯವರು ವಿರೋಧ ಪಕ್ಷಗಳ ವಿರುದ್ಧ ಶುಕ್ರವಾರ ತೀವ್ರವಾಗಿ ಕಿಡಿಕಾರಿದ್ದಾರೆ.

ನಿನ್ನೆಯಷ್ಟೇ ಮುಂಬೈ ನಲ್ಲಿ ಮನೋಜ್ ತಿವಾರಿಯವರ ಕಾರಿನ ಮೇಲೆ ಅನಾಮಧೇಯ ವ್ಯಕ್ತಿಗಳು ದಾಳಿ ನಡೆಸಿ, ಪರಾರಿಯಾಗಿದ್ದರು.

ಪ್ರಕರಣ ಸಂಬಂಧ ವಿರೋಧ ಪಕ್ಷಗಳ ವಿರುದ್ಧ ಕಿಡಿಕಾರಿರುವ ಮನೋಜ್ ತಿವಾರಿಯವರು, ಘಟನೆ ನಿಜಕ್ಕೂ ಆಶ್ಚರ್ಯವನ್ನುಂಟು ಮಾಡಿದೆ. ಏನೇ ಆದರೂ ಜನರು ನನಗೆ ಬೆಂಬಲವನ್ನು ನೀಡುತ್ತಿದ್ದಾರೆ. ವಿರೋಧ ಪಕ್ಷಗಳೇ ನನ್ನ ಕಾರಿನ ಮೇಲೆ ದಾಳಿ ಮಾಡಿವೆ. ದಾಳಿ ಮೂಲಕ ನನಗೆ ಬೆದರಿಕೆ ಹಾಕಲು ಯತ್ನ ನಡೆಸಿವೆ. ಆದರೆ, ಇದರಿಂದ ನಾನು ಧೈರ್ಯಗೆಟ್ಟಿಲ್ಲ ಎಂದು ಹೇಳಿದ್ದಾರೆ.

ದಾಳಿ ಸಂಬಂಧ ಈಗಾಗಲೇ ಪೊಲೀಸರ ಬಳಿ ಪ್ರಕರಣವನ್ನು ದಾಖಲಿಸಲಾಗಿದೆ. ಇದೀಗ ಪೊಲೀಸರು ತನಿಖೆ ಆರಂಭಿಸಿದ್ದಾರೆ. ನಾನೀಗ ಮುಂಬೈನಲ್ಲಿದ್ದೇನೆ. ಇಲ್ಲಿ ನನ್ನ ಮನೆಯಿದೆ. ಮನೆಯ ಎದುರಿಗೇ ಈ ರೀತಿಯ ಘಟನೆ ನಡೆದಿರುವುದು ನಿಜಕ್ಕೂ ಗಂಭೀರ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗಲ್ಫ್ ದೇಶಗಳ ಯಾವುದೇ ಬಂದರು ಸುರಕ್ಷಿತವಲ್ಲ; ಅಮೆರಿಕದ ಕ್ರಮ "ಕಡಲ್ಗಳ್ಳತನ"ಕ್ಕೆ ಸಮ: ಇರಾನ್ ಖಡಕ್ ವಾರ್ನಿಂಗ್

LPG Crisis: ಹೃದಯ ಶ್ರೀಮಂತಿಕೆ ಮೆರೆದ ಧ್ರುವ ಸರ್ಜಾ; ಆಟೋ ಚಾಲಕರಿಗೆ 25 ಲಕ್ಷ ರೂ. ನೆರವು - ಸರ್ಕಾರಕ್ಕೆ ಆಕ್ಷನ್‌ ಪ್ರಿನ್ಸ್‌ ಹೇಳಿದ್ದೇನು?

West Asia War: ಇರಾನ್‌ಗೆ ಮಿಲಿಟರಿ ಬೆಂಬಲ ನೀಡಿದರೆ ಶೇ 50ರಷ್ಟು ಸುಂಕ; ಚೀನಾಗೆ ಡೊನಾಲ್ಡ್ ಟ್ರಂಪ್ ಬೆದರಿಕೆ

SIR ಗೆ ಆಕ್ಷೇಪ; ಪಶ್ಚಿಮ ಬಂಗಾಳ ಚುನಾವಣೆ ರದ್ದತಿಗೆ ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್; ವಿರೋಧಿಗಳಿಗೆ ತೀವ್ರ ಹಿನ್ನಡೆ!

ಥಾಣೆ ಬಳಿ ಕಾಂಕ್ರೀಟ್ ಮಿಕ್ಸರ್ ಲಾರಿ - ವ್ಯಾನ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ 11 ಮಂದಿ ಸಾವು

SCROLL FOR NEXT