ರಾಯ್ ಬರೇಲಿ: ಪ್ರಧಾನಿ ನರೇಂದ್ರ ಮೋದಿಯ ಅವರ ವಿರುದ್ಧ ಶುಕ್ರವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು, ಮೋದಿ ಕೇವಲು ಸುಳ್ಳು ಭರವಸೆಗಳನ್ನು ನೀಡುವ ಮೂಲಕ ಮುಗ್ದ ಜನರ ಮೇಲೆ ಸವಾರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ತಮ್ಮ ತಾಯಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಲೋಕಸಭಾ ಕ್ಷೇತ್ರದಲ್ಲಿ ಇಂದು ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಅಚ್ಚೇ ದಿನ್ ಎಲ್ಲಿದೆ? ಪ್ರಧಾನಿ ಮೋದಿ ಶಾರುಕ್ ಖಾನ್ ಆಗಲು ಹೊರಟಿದ್ದವರು ಈಗ ಗಬ್ಬರ್ ಸಿಂಗ್ ಆಗಿದ್ದಾರೆ ವಾಗ್ದಾಳಿ ನಡೆಸಿದರು.
ಕಳೆದ ಲೋಕಸಭೆ ಚುನಾವಣೆಯಲ್ಲಿ ವಾರಣಾಸಿಯಲ್ಲಿ ಗಂಗಾ ಮಾತೆ ನನ್ನ ತಾಯಿ ಎಂದಿದ್ದ ಮೋದಿ ಭರವಸೆಗಳ ಪಟ್ಟಿಯನ್ನೇ ನೀಡಿದ್ದರು. ಆದರೆ ಇದುವರೆಗೂ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ ಎಂದು ರಾಹುಲ್ ದೂರಿದರು.
ಪ್ರಧಾನಿ ಮೋದಿಗೆ ಶ್ರೀಮಂತರ ಸಾಲವನ್ನು ಮಾತ್ರ ಮನ್ನಾ ಮಾಡಲು ಸಮಯವಿದೆ. ಆದರೆ, ಬಡವರ, ಹಿಂದುಳಿದವರ, ಶೋಷಿತರ ಸಾಲವನ್ನು ಮನ್ನಾ ಮಾಡಲು ಅವರಿಗೆ ಸಮಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ
ಯುಪಿಎ ಸರ್ಕಾರ ರಾಯಬರೇಲಿ ಜಿಲ್ಲೆಯಲ್ಲಿ ಫುಡ್ ಪಾರ್ಕ್ ಮತ್ತು ರೈಲ್ವೆ ಬೋಗಿ ನಿರ್ಮಾಣ ಘಟಕ ನೀಡಿತ್ತು. ಆದರೆ, ಕೇವಲ ರಾಜಕೀಯ ಸೇಡಿಗಾಗಿ ಪ್ರಧಾನಿ ಮೋದಿ ಇತರ ಜಿಲ್ಲೆಗೆ ವರ್ಗಾಯಿಸಿದ್ದಾರೆ ಎಂದು ಕಿಡಿಕಾರಿದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos