ತಮಿಳುನಾಡು ಮುಖ್ಯಮಂತ್ರಿ ಇ.ಕೆ.ಪಳನಿಸ್ವಾಮಿ 
ದೇಶ

ಶಶಿಕಲಾ ಅವರನ್ನು ಇಂದು ಭೇಟಿ ಮಾಡುವುದಿಲ್ಲ: ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ

ಎಐಎಡಿಎಂಕೆ ನಾಯಕಿ ವಿ.ಕೆ.ಶಶಿಕಲಾ ಅವರನ್ನು ಬೆಂಗಳೂರಿನ ಜೈಲಿನಲ್ಲಿ ಭೇಟಿ ಮಾಡುವ ಯಾವುದೇ...

ಚೆನ್ನೈ: ಎಐಎಡಿಎಂಕೆ ನಾಯಕಿ ವಿ.ಕೆ.ಶಶಿಕಲಾ ಅವರನ್ನು ಬೆಂಗಳೂರಿನ ಜೈಲಿನಲ್ಲಿ ಇಂದು ಭೇಟಿ ಮಾಡುವುದಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಅವರು ಇಂದು ಕುವತ್ತೂರು ರೆಸಾರ್ಟ್ ನಲ್ಲಿರುವ ಪಕ್ಷದ ಶಾಸಕರನ್ನು ಭೇಟಿ ಮಾಡುವ ಯೋಜನೆಯಲ್ಲಿದ್ದಾರೆ.
ಇಂದು ಬೆಂಗಳೂರಿಗೆ ಹೋಗಿ ಶಶಿಕಲಾ ಅವರನ್ನು ಭೇಟಿ ಮಾಡುವುದಿಲ್ಲ. ಕುವತ್ತೂರಿಗೆ ಹೋಗಿ ಶಾಸಕರನ್ನು ಭೇಟಿ ಮಾಡುವುದಾಗಿ ಪಳನಿಸ್ವಾಮಿ ಎಎನ್ಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಇದಕ್ಕೂ ಮುನ್ನ ಇಂದು ನಡೆದ ರಾಜಕೀಯ ಬೆಳವಣಿಗೆಯಲ್ಲಿ ಒ.ಪನ್ನೀರ್ ಸೆಲ್ವಂ ಮತ್ತು ಅವರ ಬಣ ವಿ.ಕೆ.ಶಶಿಕಲಾ ಅವರನ್ನು ಎಐಎಡಿಎಂಕೆಯ ಪ್ರಾಥಮಿಕ ಸದಸ್ಯತ್ವದಿಂದ ತೆಗೆದುಹಾಕಿದ್ದರು.
ಪಕ್ಷದ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಇ. ಮಧುಸೂದನನ್ ಅವರು ಪನ್ನೀರ್ ಸೆಲ್ವಂ ಆದೇಶವನ್ನು ಅಂಗೀಕರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

Udaipur: ನಿಜಕ್ಕೂ ಅಚ್ಚರಿ, 55ನೇ ವಯಸ್ಸಿನಲ್ಲಿ 17ನೇ ಮಗುವಿಗೆ ತಾಯಿಯಾದ ಮಹಿಳೆ!

SCROLL FOR NEXT