ಸಮಾಜವಾದಿ ಪಕ್ಷ ನಾಯಕ ಅಜಂ ಖಾನ್ 
ದೇಶ

ನಿರುದ್ಯೋಗಿಗಳಾರುವುದರಿಂದ ಮುಸ್ಲಿಮರು ಹೆಚ್ಚಾಗಿ ಮಕ್ಕಳನ್ನು ಹೆರುತ್ತಾರೆ: ಅಜಂ ಖಾನ್

ಮುಸ್ಲಿಮರಲ್ಲಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗಿರುವುದರಿಂದಲೇ ಮುಸ್ಲಿಂ ಜನಸಂಖ್ಯೆ ಹೆಚ್ಚಳವಾಗಿದೆ ಎಂದು ಸಮಾಜವಾದಿ ಪಕ್ಷ ನಾಯಕ ಅಜಂ ಖಾನ್ ಅವರು ಶುಕ್ರವಾರ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ...

ಲಖನೌ: ಮುಸ್ಲಿಮರಲ್ಲಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗಿರುವುದರಿಂದಲೇ ಮುಸ್ಲಿಂ ಜನಸಂಖ್ಯೆ ಹೆಚ್ಚಳವಾಗಿದೆ ಎಂದು ಸಮಾಜವಾದಿ ಪಕ್ಷ ನಾಯಕ ಅಜಂ ಖಾನ್ ಅವರು ಶುಕ್ರವಾರ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.

ಉತ್ತರಪ್ರದೇಶ ಕನೌಜ್ ನಲ್ಲಿ ಆಯೋಜಿಸಲಾಗಿದ್ದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿರುವ ಅವರು, ಮುಸ್ಲಿಮರಿಗೆ ಮಾಡಲು ಕೆಲಸವಿಲ್ಲ ಹಾಗೂ ಬಹುತೇಕ ಮುಸ್ಲಿಮರು ನಿರುದ್ಯೋಗಿಗಳಾಗಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ಹೆರುತ್ತಾರೆ ಎಂದು ಹೇಳಿದ್ದಾರೆ.

ಅಲ್ಪಸಂಖ್ಯಾತ ಸಮುದಾಯಕ್ಕೆ ಕೆಲಸಕೊಟ್ಟರೆ, ಮಕ್ಕಳನ್ನು ಹೆರುವುದನ್ನು ಅವರೂ ಕಡಿಮೆ ಮಾಡುತ್ತಾರೆ. ಮಕ್ಕಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಹೆರುವುದನ್ನು ಹಿಂದೂಗಳು ಮುಸ್ಲಿಮರಿಂದ ಕಲಿತಿದ್ದಾರೆಂದು ಹೇಳಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಹೇಳಿಕೆ ನೀಡಿದ್ದ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಅವರು, ದೇಶದಲ್ಲಿ ಜನಸಂಖ್ಯೆ ಏರಿಕೆಯಾಗಲು ನಾಲ್ಕು ಪತ್ನಿಯರು, 40 ಮಕ್ಖಳು ಹೊಂದಬೇಕೆಂಬ ಪರಿಕಲ್ಪನೆಯನ್ನು ಅನುಸರಿಸುತ್ತಿರುವವರೇ ಕಾರಣರಾಗಿದ್ದು, ಕೇಂದ್ರ ಸರ್ಕಾರ ಶೀಘ್ರದಲ್ಲಿಯೇ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಬೇಕಿದೆ. ಮಹಿಳೆಯರು ಕೇವಲ ಮಕ್ಕಳನ್ನು ಹೆರುವ ಯಂತ್ರಗಳಲ್ಲ. ತಾಯಿಯಂದಿರು ಹಿಂದೂಗಳೇ ಆಗಲಿ ಮುಸ್ಲಿಮರೇ ಅಗಲೀ ಅವರಿಗೆ ಗೌರವ ನೀಡಬೇಕೆಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT