ಸಮಾಜವಾದಿ ಪಕ್ಷ ನಾಯಕ ಅಜಂ ಖಾನ್ 
ದೇಶ

ನಿರುದ್ಯೋಗಿಗಳಾರುವುದರಿಂದ ಮುಸ್ಲಿಮರು ಹೆಚ್ಚಾಗಿ ಮಕ್ಕಳನ್ನು ಹೆರುತ್ತಾರೆ: ಅಜಂ ಖಾನ್

ಮುಸ್ಲಿಮರಲ್ಲಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗಿರುವುದರಿಂದಲೇ ಮುಸ್ಲಿಂ ಜನಸಂಖ್ಯೆ ಹೆಚ್ಚಳವಾಗಿದೆ ಎಂದು ಸಮಾಜವಾದಿ ಪಕ್ಷ ನಾಯಕ ಅಜಂ ಖಾನ್ ಅವರು ಶುಕ್ರವಾರ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ...

ಲಖನೌ: ಮುಸ್ಲಿಮರಲ್ಲಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗಿರುವುದರಿಂದಲೇ ಮುಸ್ಲಿಂ ಜನಸಂಖ್ಯೆ ಹೆಚ್ಚಳವಾಗಿದೆ ಎಂದು ಸಮಾಜವಾದಿ ಪಕ್ಷ ನಾಯಕ ಅಜಂ ಖಾನ್ ಅವರು ಶುಕ್ರವಾರ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.

ಉತ್ತರಪ್ರದೇಶ ಕನೌಜ್ ನಲ್ಲಿ ಆಯೋಜಿಸಲಾಗಿದ್ದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿರುವ ಅವರು, ಮುಸ್ಲಿಮರಿಗೆ ಮಾಡಲು ಕೆಲಸವಿಲ್ಲ ಹಾಗೂ ಬಹುತೇಕ ಮುಸ್ಲಿಮರು ನಿರುದ್ಯೋಗಿಗಳಾಗಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ಹೆರುತ್ತಾರೆ ಎಂದು ಹೇಳಿದ್ದಾರೆ.

ಅಲ್ಪಸಂಖ್ಯಾತ ಸಮುದಾಯಕ್ಕೆ ಕೆಲಸಕೊಟ್ಟರೆ, ಮಕ್ಕಳನ್ನು ಹೆರುವುದನ್ನು ಅವರೂ ಕಡಿಮೆ ಮಾಡುತ್ತಾರೆ. ಮಕ್ಕಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಹೆರುವುದನ್ನು ಹಿಂದೂಗಳು ಮುಸ್ಲಿಮರಿಂದ ಕಲಿತಿದ್ದಾರೆಂದು ಹೇಳಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಹೇಳಿಕೆ ನೀಡಿದ್ದ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಅವರು, ದೇಶದಲ್ಲಿ ಜನಸಂಖ್ಯೆ ಏರಿಕೆಯಾಗಲು ನಾಲ್ಕು ಪತ್ನಿಯರು, 40 ಮಕ್ಖಳು ಹೊಂದಬೇಕೆಂಬ ಪರಿಕಲ್ಪನೆಯನ್ನು ಅನುಸರಿಸುತ್ತಿರುವವರೇ ಕಾರಣರಾಗಿದ್ದು, ಕೇಂದ್ರ ಸರ್ಕಾರ ಶೀಘ್ರದಲ್ಲಿಯೇ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಬೇಕಿದೆ. ಮಹಿಳೆಯರು ಕೇವಲ ಮಕ್ಕಳನ್ನು ಹೆರುವ ಯಂತ್ರಗಳಲ್ಲ. ತಾಯಿಯಂದಿರು ಹಿಂದೂಗಳೇ ಆಗಲಿ ಮುಸ್ಲಿಮರೇ ಅಗಲೀ ಅವರಿಗೆ ಗೌರವ ನೀಡಬೇಕೆಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?