ಆಪ್ ಸಂಸದ ಭಗವಂತ್ ಮನ್ 
ದೇಶ

ಕೇಜ್ರಿವಾಲ್ ಬಳಿಕ ತಿಂಗಳ ವೇತನವನ್ನು ಶರ್ಮಿಳಾ ಪಕ್ಷಕ್ಕೆ ದೇಣಿಗೆಯಾಗಿ ನೀಡಿದ ಭಗವಂತ್ ಮನ್

ಉಕ್ಕಿನ ಮಹಿಳೆ ಎಂದೇ ಖ್ಯಾತಿ ಪಡೆದಿರುವ ಮಾನವ ಹಕ್ಕುಗಳ ಹೋರಾಗಾರ್ತಿ ಇರೋಮ್ ಶರ್ಮಿಳಾ ಅವರು ರಚಿಸಿರುವ ನೂತನ ಪಕ್ಷಕ್ಕೆ ದೇಣಿಗಗಳು ಹರಿದುಬರುತ್ತಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಬಳಿಕ ಆಪ್ ಸಂಸದ ಭಗವಂತ್ ಮನ್...

ನವದೆಹಲಿ: ಉಕ್ಕಿನ ಮಹಿಳೆ ಎಂದೇ ಖ್ಯಾತಿ ಪಡೆದಿರುವ ಮಾನವ ಹಕ್ಕುಗಳ ಹೋರಾಗಾರ್ತಿ ಇರೋಮ್ ಶರ್ಮಿಳಾ ಅವರು ರಚಿಸಿರುವ ನೂತನ ಪಕ್ಷಕ್ಕೆ ದೇಣಿಗಗಳು ಹರಿದುಬರುತ್ತಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಬಳಿಕ ಆಪ್ ಸಂಸದ ಭಗವಂತ್ ಮನ್ ಅವರೂ ಕೂಡ ತಮ್ಮ ಒಂದು ತಿಂಗಳ ವೇತನವನ್ನು ಶರ್ಮಿಳಾ ಅವರ ನೂತನ ಪಕ್ಷಕ್ಕೆ ನೀಡಿದ್ದಾರೆ.

ಇತ್ತೀಚೆಗಷ್ಟೇ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರು ಇರೋಮ್ ಶರ್ಮಿಳಾ ಅವರ ನೂತನ ಪಕ್ಷಕ್ಕೆ ರೂ.50 ಸಾವಿರ ಹಣವನ್ನು ದೇಣಿಗೆಯಾಗಿ ನೀಡಿ, ಶರ್ಮಿಳಾ ಅವರಿಗೆ ಬೆಂಬಲ ನೀಡುವಂತೆ ಜನರಿಗೆ ಕರೆ ನೀಡಿದ್ದರು.

ಇದರ ಬೆನ್ನಲ್ಲೇ ಭಗವಂತ್ ಅವರೂ ಕೂಡ ತಮ್ಮ ಒಂದು ತಿಂಗಳ ವೇತನವನ್ನು ಇರೋಣ್ ಶರ್ಮಿಳಾ ಅವರ ನೂತನ ಪಕ್ಷದ ಅಭಿವೃದ್ಧಿಗೆ ದೇಣಿಗೆಯಾಗಿ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಈ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಭ್ರಷ್ಟಾಚಾರ ಹಾಗೂ ಮಣಿಪುರದ ನ್ಯಾಯಕ್ಕಾಗಿ ಇರೋಮ್ ಶರ್ಮಿಳಾ ಅವರು ಹೋರಾಟ ಮಾಡುತ್ತಿದ್ದು, ನಾನೊಬ್ಬ ಸಂಸತ್ತಿನ ಸದಸ್ಯನಾಗಿದ್ದು ಶರ್ಮಿಳಾ ಅವರಿಗೆ ನನ್ನ ಒಂದು ತಿಂಗಳ ವೇತನವನ್ನು ನೀಡುತ್ತಿದ್ದೇನೆಂದು ಹೇಳಿಕೊಂಡಿದ್ದಾರೆ.

ದೇಣಿಗೆಗೆ ಶರ್ಮಿಳಾ ಅವರ ನೂತನ ಪಕ್ಷ ಜನತಾ ಪುನರುಜ್ಜೀವನ ಮತ್ತು ನ್ಯಾಯ ಮೈತ್ರಿಕೂಟ ಪ್ರತಿಕ್ರಿಯೆ ನೀಡಿದ್ದು, ನಮ್ಮ ಮೇಲೆ ನಂಬಿಕೆಯಿಟ್ಟು ನಮ್ಮ ಹೋರಾಟಕ್ಕೆ ಬೆಂಬಲ ನೀಡುತ್ತಿರುವುದಕ್ಕೆ ಭಗವಂತ್ ಮನ್ ಅವರಿಗೆ ಬಹಳ ಧನ್ಯವಾದಗಳು. ಮಣಿಪುರವನ್ನು ಉತ್ತಮ ರಾಜ್ಯವಾಗಿ ಬದಲಾಯಿಸುತ್ತೇವೆಂದು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT