ಎಂ.ವೀರಪ್ಪ ಮೊಯ್ಲಿ 
ದೇಶ

ವಿರೋಧ ಪಕ್ಷದ ಅನುಪಸ್ಥಿತಿಯಲ್ಲಿ ಸದನ ಪರೀಕ್ಷೆ ಪ್ರಜಾಪ್ರಭುತ್ವಕ್ಕೆ ವಿರುದ್ಧ: ವೀರಪ್ಪ ಮೊಯ್ಲಿ

ವಿರೋಧ ಪಕ್ಷ ಸದಸ್ಯರ ಅನುಪಸ್ಥಿತಿಯಲ್ಲಿ ಇತ್ತೀಚೆಗೆ ನಡೆದ ಸದನ ಪರೀಕ್ಷೆಯನ್ನು ಟೀಕಿಸಿದ ಮಾಜಿ ಕೇಂದ್ರ ಸಚಿವ...

ಚೆನ್ನೈ: ವಿರೋಧ ಪಕ್ಷ ಸದಸ್ಯರ ಅನುಪಸ್ಥಿತಿಯಲ್ಲಿ ಇತ್ತೀಚೆಗೆ ನಡೆದ ಸದನ ಪರೀಕ್ಷೆಯನ್ನು ಟೀಕಿಸಿದ ಮಾಜಿ ಕೇಂದ್ರ ಸಚಿವ ಹಾಗೂ ಸಂಸದ ಎಂ.ವೀರಪ್ಪ ಮೊಯ್ಲಿ, ಇದು ಪ್ರಜಾಪ್ರಭುತ್ವ ಇತಿಹಾಸದಲ್ಲಿ ಕರಾಳ ದಿನವಾಗಿದ್ದು, ತಮಿಳುನಾಡು ರಾಜ್ಯಪಾಲ ಸಿ.ವಿದ್ಯಾಸಾಗರ್ ರಾವ್ ಸಂವಿಧಾನದ ಪ್ರಕಾರ ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ.
''ಇದು ದೇಶದ ಸಂವಿಧಾನಕ್ಕೆ ಅತ್ಯಂತ ದುರದೃಷ್ಟಕರವಾಗಿದೆ. ಪ್ರಜಾಪ್ರಭುತ್ವ ಇತಿಹಾಸದಲ್ಲಿ ಇದು ಅತ್ಯಂತ ಕರಾಳ ದಿನ. ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿಕೊಂಡ ಪಳನಿಸ್ವಾಮಿಯವರಲ್ಲಿ ರಾಜ್ಯಪಾಲರು ಸಂವಿಧಾನದ ಪ್ರಕಾರ ವಿಶ್ವಾಸಮತ ತೆಗೆದುಕೊಳ್ಳುವಂತೆ ಸೂಚಿಸಿದ್ದರು. ಕೇವಲ ವೋಟು ಪಡೆಯುವುದು ವಿಶ್ವಾಸಮತ ಗಳಿಸಿದಂತೆ ಅಲ್ಲ ಎಂದು ಮೊಯ್ಲಿ ಎಎನ್ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡುತ್ತಾ ಹೇಳಿದರು.
ರಾಜ್ಯಪಾಲರ ಬಗ್ಗೆ ಟೀಕಿಸಿದ ಅವರು ಸಂವಿಧಾನದ ನಿಯಮ ಪ್ರಕಾರ ಅವರು ತಮ್ಮ ಕರ್ತವ್ಯ ನಿರ್ವಹಿಸುವಲ್ಲಿ ಸೋತಿದ್ದಾರೆ ಎಂದರು.
ಮುಖ್ಯಮಂತ್ರಿಯವರು ಪಡೆದ ವಿಶ್ವಾಸಮತದ ಮೇಲೆ ನನಗೆ ಸಂಶಯವಿದೆ. ಅಂತಿಮವಾಗಿ ಮುಖ್ಯಮಂತ್ರಿ ನೇಮಕದ ನಿರ್ಧಾರ ರಾಜ್ಯಪಾಲರಿಗೆ ಬಿಟ್ಟಿದ್ದು. ಪಳನಿಸ್ವಾಮಿಯವರಿಗೆ ಜನರ ಬೆಂಬಲ ಕಡಿಮೆಯಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ರಾಜೀನಾಮೆ; ಸಿಎಲ್‌ಪಿ ಸಭೆ ಶನಿವಾರ; ಅಂದೇ ನೂತನ ಸಿಎಂ ಪ್ರಮಾಣ ವಚನ ಸಾಧ್ಯತೆ!

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

ನಿಮ್ಮ ಪ್ರೀತಿಗೆ ಧನ್ಯವಾದ: ರಾಜೀನಾಮೆ ನೀಡಿದ ಬಳಿಕ ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಭಾವುಕ ಪೋಸ್ಟ್!

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

Siddaramaiah ರಾಜಿನಾಮೆ: 'ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ': BC ಪಾಟೀಲ್ ಭಾವುಕ

SCROLL FOR NEXT