ಸಾಂದರ್ಭಿಕ ಚಿತ್ರ 
ದೇಶ

ಹಾಡಹಗಲೇ ತಮಿಳುನಾಡು ಟಿವಿ ಪತ್ರಕರ್ತನಿಗೆ ಇರಿದ ಗಾಂಜಾಗ್ಯಾಂಗ್

ಟಿವಿ ಪತ್ರಕರ್ತನಿಗೆ ಹಾಡಹಗಲೇ ರಸ್ತೆ ಮದ್ಯದಲ್ಲಿ ಗಾಂಜಾ ತಂಡವೊಂದು ಹೊಟ್ಟೆಗೆ ಇರಿದಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ...

ಮಧುರೈ: ಟಿವಿ ಪತ್ರಕರ್ತನಿಗೆ  ಹಾಡಹಗಲೇ ರಸ್ತೆ ಮದ್ಯದಲ್ಲಿ ಗಾಂಜಾ ತಂಡವೊಂದು ಹೊಟ್ಟೆಗೆ ಇರಿದಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ಪಾಲಿಮಾರ್ ಟಿವಿ ಚಾನೆಲ್ ವರದಿಗಾರ ಆರ್ ,ಚಂದನ್ ಎಂಬುವರಿಗೆ ಮಧುರೈನ ತಮ್ಮ ಮನೆಯ ಪಕ್ಕದ ಅಂಗಡಿವೊಂದರಲ್ಲಿ ಸಾಮಾನು ಖರೀದಿಸುವ ವೇಳೆ ಬಂದ ತಂಡವೊಂದು ಹೊಟ್ಟೆಗೆ ಇರಿಯಲಾಗಿದೆ. ಮಧುರೈನ ತಬಲ್ ಥಂಢಿ ನಗರ್ ನಲ್ಲಿ ತಮ್ಮ ಇಬ್ಬರು ಮಕ್ಕಳು ಹಾಗೂ ಪತ್ನಿ ಜೊತೆ ವಾಸವಿದ್ದಾರೆ. 
ಬೆಳಗ್ಗೆ 7.30 ರ ಸುಮಾರಿಗೆ ತಮ್ಮ ಮನೆಯ ಪಕ್ಕದ ಅಂಗಡಿಯಲ್ಲಿ ಹಾಲು ಖರೀದಿಸಿ ಬರುತ್ತಿದ್ದಾಗ ದಾರಿಯಲ್ಲಿ ಚಂದ್ರನ್ ಅವರನ್ನು ಸುತ್ತುವರಿದ ತಂಡವೊಂದು, ಚಾಕುವಿನಿಂದ ಇರಿದು ಪರಾರಿಯಾಗಿದೆ, ಈ ಹಿಂದೆ ಗಾಂಜಾ ಗ್ಯಾಂಗ್ ವೊಂದರ ವಿರುದ್ಧ ಚಂದ್ರನ್ ದೂರು ದಾಖಲಿಸಿದ್ದರು. ಅದರ ದ್ವೇಷಕ್ಕಾಗಿ ಈ ಕೃತ್ಯ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಕೂಡಲೇ ಚಂದ್ರನ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.  ಕಳೆದ ಅಕ್ಟೋಬರ್ ನಲ್ಲಿ ಚಂದ್ರನ್ ಅವರ 18 ವರ್ಷದ ಮಗನ ಮೇಲೂ ಇದೇ ರೀತಿಯ ದಾಳಿ ನಡೆದಿತ್ತು. ಈ ಸಂಬಂಧ ತಲ್ಲಕುಲಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT