ದೆಹಲಿ ಸರಣಿ ಸ್ಫೋಟ 
ದೇಶ

ಹಣ ವರ್ಗಾವಣೆ ಪ್ರಕರಣ: 2005ರ ದೆಹಲಿ ಸರಣಿ ಸ್ಫೋಟದ ಮಾಸ್ಟರ್‌ಮೈಂಡ್‌ ದಾರ್‌ಗೆ ಜಾಮೀನು

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ 2005ರ ದೆಹಲಿ ಸರಣಿ ಸ್ಫೋಟದ ಮಾಸ್ಟರ್‌ಮೈಂಡ್‌ ತಾರೀಕ್ ಅಹ್ಮದ್ ದಾರ್ ಗೆ ಜಾಮೀನು ಸಿಕ್ಕಿದೆ...

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ 2005ರ ದೆಹಲಿ ಸರಣಿ ಸ್ಫೋಟದ ಮಾಸ್ಟರ್‌ಮೈಂಡ್‌ ತಾರೀಕ್ ಅಹ್ಮದ್ ದಾರ್ ಗೆ ಜಾಮೀನು ಸಿಕ್ಕಿದೆ. 
25 ಸಾವಿರ ವೈಯಕ್ತಿಕ ಬಾಂಡ್ ನೊಂದಿಗೆ ಕೋರ್ಟ್ ತಾರೀಕ್ ಅಹ್ಮದ್ ದಾರ್ ಗೆ ಜಾಮೀನು ಮಂಜೂರು ಮಾಡಿದೆ. 
ಹಣ ಚಲಾವಣೆ ತಡೆಗಟ್ಟುವಿಕೆ ಕಾಯ್ದೆಯಡಿ ದಾರ್ ವಿರುದ್ಧ ಮೊಕದ್ದಮೆ ಅವರ ಮೇಲಿದ್ದು, ಹೀಗಾಗಿ ಜಾಮೀನು ಸಿಕ್ಕರು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇಲ್ಲ. 
2005ರ ದೆಹಲಿ ಸರಣಿ ಸ್ಫೋಟ ಪ್ರಕರಣ ಸಂಬಂಧ 2008ರಲ್ಲಿ ಭಯೋತ್ಪಾದನೆ ಚಟುವಟಿಕೆ ನಡೆಸಲು ವಿದೇಶಿ ಹಣ ಪಡೆದಿರುವುದಾಗಿ ದಾರ್ ವಿರುದ್ಧ ಹಣ ಚಲಾವಣೆ ತಡೆಗಟ್ಟುವಿಕೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. 
2005ರ ಅಕ್ಟೋಬರ್ 20ರಂದು ದೆಹಲಿಯ ಸರೋಜಿನಿ ನಗರ, ಕಾಲ್ಕಾಜಿ ಹಾಗೂ ಪಹರ್ ಗಂಜ್ ಗಳಲ್ಲಿ ನಡೆದಿದ್ದ ಸರಣಿ ಸ್ಫೋಟದಲ್ಲಿ 67 ಜನರು ಮೃತಪಟ್ಟಿದ್ದು 200ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT