ರಾಜ್ಯಪಾಲ ವಿದ್ಯಾಸಾಗರ್ ರಾವ್ 
ದೇಶ

ವಿಶ್ವಾಸ ಮತ ಗದ್ದಲ ಪ್ರಕರಣ: ವರದಿ ಕೇಳಿದ ರಾಜ್ಯಪಾಲ ವಿದ್ಯಾಸಾಗರ್ ರಾವ್

ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಸರ್ಕಾರದ ವಿಶ್ವಾಸ ಮತಯಾಚನೆಯ ವಿಶೇಷ ಅಧಿವೇಶನದ ವೇಳೆ ನಡೆಸಿದ್ದ ತೀವ್ರ ಗದ್ದಲ ಪ್ರಕರಣ ಕುರಿತಂತೆ 'ವಾಸ್ತವಾಂಶ ವರದಿ' ಸಲ್ಲಿಸುವಂತೆ ತಮಿಳುನಾಡು ವಿಧಾನಸಭೆ ಕಾರ್ಯದರ್ಶಿಗೆ ರಾಜ್ಯಪಾಲ...

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಸರ್ಕಾರದ ವಿಶ್ವಾಸ ಮತಯಾಚನೆಯ ವಿಶೇಷ ಅಧಿವೇಶನದ ವೇಳೆ ನಡೆಸಿದ್ದ ತೀವ್ರ ಗದ್ದಲ ಪ್ರಕರಣ ಕುರಿತಂತೆ 'ವಾಸ್ತವಾಂಶ ವರದಿ' ಸಲ್ಲಿಸುವಂತೆ ತಮಿಳುನಾಡು ವಿಧಾನಸಭೆ ಕಾರ್ಯದರ್ಶಿಗೆ ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರು ಸೋಮವಾರ ನಿರ್ದೇಶನ ನೀಡಿದ್ದಾರೆ.

ವಿಶ್ವಾಸ ಮತಯಾಚನೆ ಪ್ರಕರಣಗಳ ಸಂಬಂಧ ನಿನ್ನೆಯಷ್ಟೇ ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರನ್ನು ಮಾಜಿ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಅವರು ಸೇರಿದಂತೆ ಮೂರು ಬಣಗಳ ನಾಯಕರು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಮಾತುಕತೆ ಬಳಿಕ ರಾಜ್ಯಪಾಲರು ವಿಧಾನಸಭೆ ಕಾರ್ಯದರ್ಶಿ ಎ.ಎಂ.ಪಿ. ಜಮಾಲುದ್ದೀನ್ ಅವರಿಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.

ವರದಿಯಲ್ಲಿ ರಾಜ್ಯಪಾಲರು ಕೆಲ ಸೂಚನೆಗಳನ್ನು ನೀಡಿದ್ದು, ವರದಿಯಲ್ಲಿ ಎಲ್ಲಾ ರೀತಿಯ ದಾಖಲೆಗಳು ಹಾಗೂ ವಿಡಿಯೋ ಸಾಕ್ಷಿಗಳಿರಬೇಕೆಂದು ಸೂಚನೆ ನೀಡಿದ್ದಾರೆಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT