ರಾಜ್ಯಪಾಲ ವಿದ್ಯಾಸಾಗರ್ ರಾವ್ 
ದೇಶ

ವಿಶ್ವಾಸ ಮತ ಗದ್ದಲ ಪ್ರಕರಣ: ವರದಿ ಕೇಳಿದ ರಾಜ್ಯಪಾಲ ವಿದ್ಯಾಸಾಗರ್ ರಾವ್

ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಸರ್ಕಾರದ ವಿಶ್ವಾಸ ಮತಯಾಚನೆಯ ವಿಶೇಷ ಅಧಿವೇಶನದ ವೇಳೆ ನಡೆಸಿದ್ದ ತೀವ್ರ ಗದ್ದಲ ಪ್ರಕರಣ ಕುರಿತಂತೆ 'ವಾಸ್ತವಾಂಶ ವರದಿ' ಸಲ್ಲಿಸುವಂತೆ ತಮಿಳುನಾಡು ವಿಧಾನಸಭೆ ಕಾರ್ಯದರ್ಶಿಗೆ ರಾಜ್ಯಪಾಲ...

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಸರ್ಕಾರದ ವಿಶ್ವಾಸ ಮತಯಾಚನೆಯ ವಿಶೇಷ ಅಧಿವೇಶನದ ವೇಳೆ ನಡೆಸಿದ್ದ ತೀವ್ರ ಗದ್ದಲ ಪ್ರಕರಣ ಕುರಿತಂತೆ 'ವಾಸ್ತವಾಂಶ ವರದಿ' ಸಲ್ಲಿಸುವಂತೆ ತಮಿಳುನಾಡು ವಿಧಾನಸಭೆ ಕಾರ್ಯದರ್ಶಿಗೆ ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರು ಸೋಮವಾರ ನಿರ್ದೇಶನ ನೀಡಿದ್ದಾರೆ.

ವಿಶ್ವಾಸ ಮತಯಾಚನೆ ಪ್ರಕರಣಗಳ ಸಂಬಂಧ ನಿನ್ನೆಯಷ್ಟೇ ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರನ್ನು ಮಾಜಿ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಅವರು ಸೇರಿದಂತೆ ಮೂರು ಬಣಗಳ ನಾಯಕರು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಮಾತುಕತೆ ಬಳಿಕ ರಾಜ್ಯಪಾಲರು ವಿಧಾನಸಭೆ ಕಾರ್ಯದರ್ಶಿ ಎ.ಎಂ.ಪಿ. ಜಮಾಲುದ್ದೀನ್ ಅವರಿಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.

ವರದಿಯಲ್ಲಿ ರಾಜ್ಯಪಾಲರು ಕೆಲ ಸೂಚನೆಗಳನ್ನು ನೀಡಿದ್ದು, ವರದಿಯಲ್ಲಿ ಎಲ್ಲಾ ರೀತಿಯ ದಾಖಲೆಗಳು ಹಾಗೂ ವಿಡಿಯೋ ಸಾಕ್ಷಿಗಳಿರಬೇಕೆಂದು ಸೂಚನೆ ನೀಡಿದ್ದಾರೆಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

SCROLL FOR NEXT