ರಾಮ್ಜಾಸ್ ಕಾಲೇಜು ಆವರಣ 
ದೇಶ

ಜೆಎನ್‌ಯು ವಿದ್ಯಾರ್ಥಿ ಉಮರ್ ಖಾಲಿದ್‌ಗೆ ಆಹ್ವಾನ: ದೆಹಲಿ ರಾಮ್ಜಾಸ್ ಕಾಲೇಜಿನಲ್ಲಿ ಘರ್ಷಣೆ

ದೆಹಲಿಯ ರಾಮ್ಜಾಸ್ ಕಾಲೇಜಿನಲ್ಲಿ ಸೆಮಿನಾರ್ ಗೆ ದೇಶ ವಿರೋಧಿ ಘೋಷಣೆ ಆರೋಪಿಗಳಾದ ಜವಹಾರ್‌ಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಾದ ಉಮರ್...

ನವದೆಹಲಿ: ದೆಹಲಿಯ ರಾಮ್ಜಾಸ್ ಕಾಲೇಜಿನಲ್ಲಿ ಸೆಮಿನಾರ್ ಗೆ ದೇಶ ವಿರೋಧಿ ಘೋಷಣೆ ಆರೋಪಿಗಳಾದ ಜವಹಾರ್‌ಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಾದ ಉಮರ್ ಖಲಿದ್ ಮತ್ತು ರಶೀದ್ ಗೆ ಆಹ್ವಾನ ನೀಡಿದ್ದಕ್ಕೆ ಕಾಲೇಜು ಮುಂದೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 
ದಿ ವಾರ್ ಇನ್ ಆದಿವಾಸಿಸ್ ಏರಿಯಾಸ್ ವಿಷಯದಲ್ಲಿ ಖಲೀದ್ ಜೆಎನ್ಯು ಕಾಲೇಜಿನಲ್ಲಿ ಪಿಹೆಚ್ಡಿ ಮಾಡುತ್ತಿದ್ದು ಇದೇ ವಿಷಯವಾಗಿ ಮಾತನಾಡಲು ದೆಹಲಿ ರಾಮ್ಜಾಸ್ ಕಾಲೇಜಿನ ಸಾಹಿತ್ಯ ಸಮಾಜ ಆತನನ್ನು ಆಹ್ವಾನಿಸಿತ್ತು ಇದಕ್ಕೆ ವಿರೋಧ ವ್ಯಕ್ತಪಡಿಸಿ ಕಾಲೇಜಿನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಪ್ರತಿಭಟನೆ ನಡೆಸಿತ್ತು. 
ಈ ವೇಳೆ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಶನ್ ವಿದ್ಯಾರ್ಥಿಗಳು ಮತ್ತು ಎಬಿವಿಬಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆಸಿದೆ. ಈ ಸಂದರ್ಭದಲ್ಲಿ ಉಭಯ ವಿದ್ಯಾರ್ಥಿ ಸಂಘಟನೆಗಳ ನಡುವೆ ಕೈ ಕೈ ಮಿಲಾಯಿಸಿದರು. ಪೊಲೀಸರು ಮಧ್ಯಪ್ರವೇಶಿಸಿದರು ಸಂಘಟನೆ ವಿದ್ಯಾರ್ಥಿಗಳು ಹಿಮ್ಮೆಟ್ಟಲಿಲ್ಲ. ಇದರಿಂದಾಗಿ ಉಪನ್ಯಾಸಕರು ಅಸಮಾಧಾನ ವ್ಯಕ್ತಪಡಿಸಿದರು. 
ಉಮರ್ ಖಾಲಿದ್ ಆಹ್ವಾನ ಸಂಬಂಧ ಪ್ರತಿಭಟನೆಗಳು ನಡೆದ ಹಿನ್ನೆಲೆ ಸೆಮಿನಾರ್ ಅನ್ನು ಸ್ಥಗಿತಗೊಳಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರು ರಾಜೇಂದ್ರ ಪ್ರಸಾದ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT