ರಾಮ್ಜಾಸ್ ಕಾಲೇಜು ಆವರಣ 
ದೇಶ

ಜೆಎನ್‌ಯು ವಿದ್ಯಾರ್ಥಿ ಉಮರ್ ಖಾಲಿದ್‌ಗೆ ಆಹ್ವಾನ: ದೆಹಲಿ ರಾಮ್ಜಾಸ್ ಕಾಲೇಜಿನಲ್ಲಿ ಘರ್ಷಣೆ

ದೆಹಲಿಯ ರಾಮ್ಜಾಸ್ ಕಾಲೇಜಿನಲ್ಲಿ ಸೆಮಿನಾರ್ ಗೆ ದೇಶ ವಿರೋಧಿ ಘೋಷಣೆ ಆರೋಪಿಗಳಾದ ಜವಹಾರ್‌ಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಾದ ಉಮರ್...

ನವದೆಹಲಿ: ದೆಹಲಿಯ ರಾಮ್ಜಾಸ್ ಕಾಲೇಜಿನಲ್ಲಿ ಸೆಮಿನಾರ್ ಗೆ ದೇಶ ವಿರೋಧಿ ಘೋಷಣೆ ಆರೋಪಿಗಳಾದ ಜವಹಾರ್‌ಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಾದ ಉಮರ್ ಖಲಿದ್ ಮತ್ತು ರಶೀದ್ ಗೆ ಆಹ್ವಾನ ನೀಡಿದ್ದಕ್ಕೆ ಕಾಲೇಜು ಮುಂದೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 
ದಿ ವಾರ್ ಇನ್ ಆದಿವಾಸಿಸ್ ಏರಿಯಾಸ್ ವಿಷಯದಲ್ಲಿ ಖಲೀದ್ ಜೆಎನ್ಯು ಕಾಲೇಜಿನಲ್ಲಿ ಪಿಹೆಚ್ಡಿ ಮಾಡುತ್ತಿದ್ದು ಇದೇ ವಿಷಯವಾಗಿ ಮಾತನಾಡಲು ದೆಹಲಿ ರಾಮ್ಜಾಸ್ ಕಾಲೇಜಿನ ಸಾಹಿತ್ಯ ಸಮಾಜ ಆತನನ್ನು ಆಹ್ವಾನಿಸಿತ್ತು ಇದಕ್ಕೆ ವಿರೋಧ ವ್ಯಕ್ತಪಡಿಸಿ ಕಾಲೇಜಿನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಪ್ರತಿಭಟನೆ ನಡೆಸಿತ್ತು. 
ಈ ವೇಳೆ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಶನ್ ವಿದ್ಯಾರ್ಥಿಗಳು ಮತ್ತು ಎಬಿವಿಬಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆಸಿದೆ. ಈ ಸಂದರ್ಭದಲ್ಲಿ ಉಭಯ ವಿದ್ಯಾರ್ಥಿ ಸಂಘಟನೆಗಳ ನಡುವೆ ಕೈ ಕೈ ಮಿಲಾಯಿಸಿದರು. ಪೊಲೀಸರು ಮಧ್ಯಪ್ರವೇಶಿಸಿದರು ಸಂಘಟನೆ ವಿದ್ಯಾರ್ಥಿಗಳು ಹಿಮ್ಮೆಟ್ಟಲಿಲ್ಲ. ಇದರಿಂದಾಗಿ ಉಪನ್ಯಾಸಕರು ಅಸಮಾಧಾನ ವ್ಯಕ್ತಪಡಿಸಿದರು. 
ಉಮರ್ ಖಾಲಿದ್ ಆಹ್ವಾನ ಸಂಬಂಧ ಪ್ರತಿಭಟನೆಗಳು ನಡೆದ ಹಿನ್ನೆಲೆ ಸೆಮಿನಾರ್ ಅನ್ನು ಸ್ಥಗಿತಗೊಳಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರು ರಾಜೇಂದ್ರ ಪ್ರಸಾದ್ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ