ರಾಮ್ಜಾಸ್ ಕಾಲೇಜು ಆವರಣ 
ದೇಶ

ಜೆಎನ್‌ಯು ವಿದ್ಯಾರ್ಥಿ ಉಮರ್ ಖಾಲಿದ್‌ಗೆ ಆಹ್ವಾನ: ದೆಹಲಿ ರಾಮ್ಜಾಸ್ ಕಾಲೇಜಿನಲ್ಲಿ ಘರ್ಷಣೆ

ದೆಹಲಿಯ ರಾಮ್ಜಾಸ್ ಕಾಲೇಜಿನಲ್ಲಿ ಸೆಮಿನಾರ್ ಗೆ ದೇಶ ವಿರೋಧಿ ಘೋಷಣೆ ಆರೋಪಿಗಳಾದ ಜವಹಾರ್‌ಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಾದ ಉಮರ್...

ನವದೆಹಲಿ: ದೆಹಲಿಯ ರಾಮ್ಜಾಸ್ ಕಾಲೇಜಿನಲ್ಲಿ ಸೆಮಿನಾರ್ ಗೆ ದೇಶ ವಿರೋಧಿ ಘೋಷಣೆ ಆರೋಪಿಗಳಾದ ಜವಹಾರ್‌ಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಾದ ಉಮರ್ ಖಲಿದ್ ಮತ್ತು ರಶೀದ್ ಗೆ ಆಹ್ವಾನ ನೀಡಿದ್ದಕ್ಕೆ ಕಾಲೇಜು ಮುಂದೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 
ದಿ ವಾರ್ ಇನ್ ಆದಿವಾಸಿಸ್ ಏರಿಯಾಸ್ ವಿಷಯದಲ್ಲಿ ಖಲೀದ್ ಜೆಎನ್ಯು ಕಾಲೇಜಿನಲ್ಲಿ ಪಿಹೆಚ್ಡಿ ಮಾಡುತ್ತಿದ್ದು ಇದೇ ವಿಷಯವಾಗಿ ಮಾತನಾಡಲು ದೆಹಲಿ ರಾಮ್ಜಾಸ್ ಕಾಲೇಜಿನ ಸಾಹಿತ್ಯ ಸಮಾಜ ಆತನನ್ನು ಆಹ್ವಾನಿಸಿತ್ತು ಇದಕ್ಕೆ ವಿರೋಧ ವ್ಯಕ್ತಪಡಿಸಿ ಕಾಲೇಜಿನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಪ್ರತಿಭಟನೆ ನಡೆಸಿತ್ತು. 
ಈ ವೇಳೆ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಶನ್ ವಿದ್ಯಾರ್ಥಿಗಳು ಮತ್ತು ಎಬಿವಿಬಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆಸಿದೆ. ಈ ಸಂದರ್ಭದಲ್ಲಿ ಉಭಯ ವಿದ್ಯಾರ್ಥಿ ಸಂಘಟನೆಗಳ ನಡುವೆ ಕೈ ಕೈ ಮಿಲಾಯಿಸಿದರು. ಪೊಲೀಸರು ಮಧ್ಯಪ್ರವೇಶಿಸಿದರು ಸಂಘಟನೆ ವಿದ್ಯಾರ್ಥಿಗಳು ಹಿಮ್ಮೆಟ್ಟಲಿಲ್ಲ. ಇದರಿಂದಾಗಿ ಉಪನ್ಯಾಸಕರು ಅಸಮಾಧಾನ ವ್ಯಕ್ತಪಡಿಸಿದರು. 
ಉಮರ್ ಖಾಲಿದ್ ಆಹ್ವಾನ ಸಂಬಂಧ ಪ್ರತಿಭಟನೆಗಳು ನಡೆದ ಹಿನ್ನೆಲೆ ಸೆಮಿನಾರ್ ಅನ್ನು ಸ್ಥಗಿತಗೊಳಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರು ರಾಜೇಂದ್ರ ಪ್ರಸಾದ್ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT