ಸಂಗ್ರಹ ಚಿತ್ರ 
ದೇಶ

ಹೈದರಾಬಾದ್ ನಲ್ಲಿ ಭೀಕರ ಅಗ್ನಿ ಅವಘಡ; ಆರು ಮಂದಿ ಸಜೀವ ದಹನ!

ಹೈದರಾಬಾದ್ ನಲ್ಲಿರುವ ಎಸಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಿಂದಾಗಿ ಆರು ಮಂದಿ ಸಜೀವ ದಹನವಾಗಿರುವ ಘಟನೆ ಬುಧವಾರ ನಡೆದಿದೆ.

ಹೈದರಾಬಾದ್: ಹೈದರಾಬಾದ್ ನಲ್ಲಿರುವ ಎಸಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಿಂದಾಗಿ ಆರು ಮಂದಿ ಸಜೀವ ದಹನವಾಗಿರುವ ಘಟನೆ ಬುಧವಾರ ನಡೆದಿದೆ.

ಹೈದರಾಬಾದ್ ನ ಅತ್ತಾಪುರ ರಾಜೇಂದ್ರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ಸಂಭವಿಸಿದ್ದು, ಮೃತರೆಲ್ಲರೂ ಒಡಿಶಾ ಮೂಲದ ಕಾರ್ಮಿಕರು ಎಂದು ತಿಳಿದುಬಂದಿದೆ. "ಎ1 ಏರ್ ಕೂಲರ್ಸ್" ತಂಡದ ಶೆಡ್ ಗೆ ಬೆಂಕಿ  ಬಿದ್ದಿದ್ದು, ಅಗ್ನಿ ಅವಘಡಕ್ಕೆ ಏರ್ ಕೂಲರ್ ಒಂದರಲ್ಲಿನ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಹೇಳಲಾಗುತ್ತಿದ್ದರೂ, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

ಇನ್ನು ಘಟನೆಯಲ್ಲಿ ಗಾಯಗೊಂಡಿರುವ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸುಮಾರು 4ಕ್ಕೂ ಹೆಚ್ಚು ಅಗ್ನಿ ಶಾಮಕ ವಾಹನಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು, ಸತತ ಬೆಂಕಿ ನಂದಿಸುವ  ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಅಗ್ನಿ ಅವಘಡ ಸಂದರ್ಭದಲ್ಲಿ ಘಟಕದಲ್ಲಿ ಎಷ್ಟು ಮಂದಿ ಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿಲ್ಲ. ಕಾರ್ಯಾಚರಣೆ ಮುಕ್ತಾಯದ ಬಳಿಕವಷ್ಟೇ ಎಲ್ಲ ಮಾಹಿತಿ ತಿಳಿಯಲಿದೆ ಎಂದು ಅಧಿಕಾರಿಯೊಬ್ಬರು  ತಿಳಿಸಿದ್ದಾರೆ. ಆರು ಮಂದಿ ಮೃತರ ಪೈಕಿ ನಾಲ್ಕು ಮಂದಿಯ ಮೃತ ದೇಹಗಳನ್ನು ಗುರುತಿಸಲಾಗಿದ್ದು, ಮೃತರನ್ನು ಇರ್ಫಾನ್, ಸದ್ದಾಂ, ಶಾರುಖ್ ಮತ್ತು ಅಯೂಬ್ ಖಾನ್ ಎಂದು ಹೇಳಲಾಗುತ್ತಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುವ ಶಂಕೆ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Vladimir Putin ಭೇಟಿ ಮುನ್ನ ಭಾರತ-ರಷ್ಯಾ ಒಪ್ಪಂದಕ್ಕೆ ಸಹಿ: ಡಿ. 4ರಂದು ದೆಹಲಿಯಲ್ಲಿ 23ನೇ ಶೃಂಗಸಭೆ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾ ತತ್ತರ: ನೆರವು ನೀಡುವ ವಿಮಾನಗಳಿಗೆ ಅನುಮತಿ ವಿಳಂಬ, ಪಾಕ್ ಆರೋಪದ ವಿರುದ್ಧ ಭಾರತ ತೀವ್ರ ಕಿಡಿ

ಕುಡುಕರಿಗೊಬ್ಬ, ಬ್ಯಾಚುಲರ್‌ಗಳಿಗೆ ಮತ್ತೊಬ್ಬ ದೇವರು: ಹಿಂದೂಗಳಲ್ಲಿ ಎಷ್ಟು ದೇವರಿದ್ದಾರೆ: 3 ಕೋಟಿ ಇದ್ದಾರಾ? ವಿವಾದವೆಬ್ಬಿಸಿದ ರೇವಂತ್ ರೆಡ್ಡಿ ಹೇಳಿಕೆ

ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ಕಬ್ಬಿನ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ; ಸ್ಥಳದಲ್ಲೇ ನಾಲ್ವರು ಯುವಕರ ದುರ್ಮರಣ

ಬಳ್ಳಾರಿ: ಗಣಿಗಾರಿಕೆ ಚಟುವಟಿಕೆಗಳಿಂದ 'ದೇವದಾರು' ಅರಣ್ಯ ಉಳಿಸಲು ರೈತರಿಂದ 'ಅಪ್ಪಿಕೊ' ಚಳುವಳಿ !

SCROLL FOR NEXT