ದೇವೇಂದ್ರ ಫಡ್ನವಿಸ್-ನರೇಂದ್ರ ಮೋದಿ
ಮುಂಬೈ: ಬೃಹತ್ ಮುಂಬೈ ಮಹಾನಗರ ಪಾಲಿಕೆ(ಬಿಎಂಸಿ) ಚುನಾವಣೆಯಲ್ಲಿ ಬಿಜೆಪಿ 81 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಎರಡನೇ ಸ್ಥಾನದಲ್ಲಿದ್ದು ಈ ದಿಗ್ವಿಜಯದ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹರ್ಷ ವ್ಯಕ್ತಪಡಿಸಿದ್ದಾರೆ.
ಬಿಎಂಸಿ ಚುನಾವಣೆಯಲ್ಲಿ ಬಿಜೆಪಿ 81 ಸ್ಥಾನಗಳನ್ನು ಗೆದ್ದಿದ್ದು, ಇದು ನಮಗೆ ದೊಡ್ಡ ಜಯವಾಗಿದೆ. ಅಲ್ಲದೆ ಮತದಾರರು ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಇಟ್ಟಿರುವ ನಂಬಿಕೆಯನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.
ನೋಟು ನಿಷೇಧದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರ ನಂಬಿಕೆಯನ್ನು ಕಳೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ ಈ ವಿಜಯ ಮೋದಿ ಅವರ ನೋಟು ನಿಷೇಧದ ತೀರ್ಮಾನವನ್ನು ಜನರು ಬೆಂಬಲಿಸಿದ್ದಾರೆ ಎಂದು ತಿಳಿಯುತ್ತದೆ ಎಂದು ಫಡ್ನವಿಸ್ ಹೇಳಿದ್ದಾರೆ.
ಪಾರ್ಲಿ ಕ್ಷೇತ್ರದಲ್ಲಿ 10 ಸೀಟುಗಳಲ್ಲಿ 8 ಸೀಟುಗಳನ್ನು ಕಳೆದುಕೊಂಡಿರುವುದರಿಂದ ನೈತಿಕ ಹೊಣೆ ಹೊತ್ತು ಬಿಜೆಪಿ ಮುಖಂಡೆ ಪಂಕಜಾ ಮುಂಡೆ ಅವರು ರಾಜಿನಾಮೆ ನೀಡುವ ತೀರ್ಮಾನವನ್ನು ಕೈಗೊಂಡಿದ್ದು ಈ ಸಂಬಂಧ ಪ್ರತಿಕ್ರಿಯಿಸಿರುವ ಫಡ್ನವಿಸ್ ಚುನಾವಣೆಯಲ್ಲಿ ಸೋಲು ಗೆಲುವು ಸಾಮಾನ್ಯ ಎಂದುರ ಹೇಳಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos