ಪೊಲೀಸ್ ವಾಹನದ ಎದುರು ಪ್ರತಿಭಟನೆ ನಡೆಸುತ್ತಿರುವ ಎಬಿವಿಪಿ ಕಾರ್ಯಕರ್ತರು 
ದೇಶ

ಎಬಿವಿಪಿ-ಎಐಎಸ್ಎ ಘರ್ಷಣೆ; ಎಫ್ಐಆರ್ ದಾಖಲಿಸಿಕೊಂಡ ದೆಹಲಿ ಪೊಲೀಸರು

ರಾಜಧಾನಿ ದೆಹಲಿಯ ರಾಮಜಾಸ್ ಕಾಲೇಜಿನಲ್ಲಿ ಎಬಿವಿಪಿ ಹಾಗೂ ಎಐಎಸ್ಎ ನಡುವಿನ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಗುರುವಾರ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ...

ನದವೆಹಲಿ: ರಾಜಧಾನಿ ದೆಹಲಿಯ ರಾಮಜಾಸ್ ಕಾಲೇಜಿನಲ್ಲಿ ಎಬಿವಿಪಿ ಹಾಗೂ ಎಐಎಸ್ಎ ನಡುವಿನ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಗುರುವಾರ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ದೇಶದ್ರೋಹಿ ಘೋಷಣೆ ಕೂಗಿದ ವಿವಾದಕ್ಕೆ ಸಿಲುಕಿದ್ದ ದೆಹಲಿ ಜೆಎನ್'ಯು ವಿವಿಯ ವಿದ್ಯಾರ್ಥಿ ನಾಯಕ ಉಮರ್ ಖಾಲೀದ್ ನನ್ನು ವಿಚಾರಣ ಸಂಕಿರಣಕ್ಕೆ ಆಹ್ವಾನಿಸಿದ್ದರ ಸಂಬಂಧ ನಿನ್ನೆ ರಾಮಜಾಸ್ ಕಾಲೇಜಿನಲ್ಲಿ ಘರ್ಷಣೆ ಏರ್ಪಟ್ಟಿತ್ತು.

ಉಮರ್ ಖಾಲೀದ್ ಹಾಗೂ ಆತನ ಬಿಡುಗಡೆ ಪರ ಹೋರಾಟ ನಡೆಸಿದ್ದ ಶೆಹ್ಲಾ ರಶೀದ್ ರನ್ನು ರಾಮಜಾಸ್ ಕಾಲೇಜಿನ ವಿಚಾರಣ ಸಂಕಿರಣಕ್ಕೆ ಆಹ್ವಾನಿಸಿದ್ದಕ್ಕೆ ಎಬಿವಿಪಿ ವಿರೋಧ ವ್ಯಕ್ತಪಡಿಸಿತ್ತು. ಕಾಲೇಜಿನ ವಿಚಾರಣ ಸಂಕಿರಣದ ಕೊಠಡಿಗೆ ಬೀಗ ಹಾಕಿದ್ದ ಎಬಿವಿಪಿ, ಕಲ್ಲೂ ತೂರಾಟ ನಡೆಸಿತ್ತು. ಇದನ್ನು ವಿರೋಧಿಸಿ ಎಡರಂಗ ಬೆಂಬಲಿತ ಅಖಿಲ ಎಐಎಸ್ಎ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದ ಎಬಿವಿಪಿಗೆ ಅವಕಾಶ ನೀಡಲಿಲ್ಲ. ಈ ವೇಳೆ ಇಬ್ಬರ ನಡುವೆ ಘರ್ಷಣೆ ನಡೆದಿತ್ತು.

ಘರ್ಷಣೆಯಲ್ಲಿ ಎಬಿವಿಪಿಗೆ ಆರ್'ಎಸ್ಎಸ್ ಬೆಂಬಲ ವ್ಯಕ್ತಪಡಿಸಿತ್ತು. ಎಐಎಸ್ಎ ವಿದ್ಯಾರ್ಥಿಗಳಿಗೆ ಎಡರಂಗ ಬೆಂಬಲಿತ ವಿದ್ಯಾರ್ಥಿಗಳು ಬೆಂಬಲ ವ್ಯಕ್ತಪಡಿಸಿದ್ದರು. ಘರ್ಷಣೆಯಲ್ಲಿ ಪೊಲೀಸ್ ಅಧಿಕಾರಿ ಆರತಿ ಶರ್ಮಾ, ಇಬ್ಬರು ಪತ್ರಕರ್ತರು, ಪೊಲೀಸ್ ಸಿಬ್ಬಂದಿಗಳು ಸೇರಿದಂತೆ ಒಟ್ಟು 8 ಮಂದಿಗೆ ಗಾಯವಾಗಿತ್ತು ಎಂದು ಹೆಚ್ಚುವರಿ ಪೊಲೀಸ್ ಆಯುಕ್ತೆ ಇಶಾ ಪಾಂಡೆ ಅವರು ಹೇಳಿದ್ದಾರೆ.

ಪ್ರಕರಣ ಸಂಬಂಧ ಈಗಾಗಲೇ ಎಫ್ಐಆರ್ ದಾಖಲು ಮಾಡಿಕೊಳ್ಳಲಾಗಿದ್ದು, ಡಿಸಿಪಿ ರ್ಯಾಂಕ್ ಅಧಿಕಾರಿಗಳ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯಲಿದೆ ಎಂದು ಪಾಂಡೆಯವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!