ಸಾಂದರ್ಭಿಕ ಚಿತ್ರ 
ದೇಶ

ಜಗಳದಲ್ಲಿ ಗರ್ಭಿಣಿಗೆ ಒದ್ದು ಮಗು ಸಾವು: ಬಿಜೆಪಿ ಮುಖಂಡ ಸೇರಿ ಐವರ ಬಂಧನ

ಏರು ಶಬ್ದದಲ್ಲಿ ಧ್ವನಿವರ್ಧಕ ಹಾಕಿದ ಸಂಬಂಧ ನಡೆಯುತ್ತಿದ್ದ ಜಗಳದ ವೇಳೆ ಗರ್ಭಿಣಿ ಹೊಟ್ಟೆಗೆ ಕಾಲಿನಿಂದ ಒದ್ದ ಪರಿಣಾಮ ಮಗು ಸಾವನ್ನಪ್ಪಿರುವ ಘಟನೆ ಪಶ್ಚಿಮ ...

ಕೃಷ್ಣನಗರ: ಏರು ಶಬ್ದದಲ್ಲಿ ಧ್ವನಿವರ್ಧಕ ಹಾಕಿದ ಸಂಬಂಧ ನಡೆಯುತ್ತಿದ್ದ ಜಗಳದ ವೇಳೆ ಗರ್ಭಿಣಿ ಹೊಟ್ಟೆಗೆ ಕಾಲಿನಿಂದ ಒದ್ದ ಪರಿಣಾಮ ಮಗು ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಕೃಷ್ಣನಗರ್ ಎಂಬಲ್ಲಿ ನಡೆದಿದೆ.

ನಾಡಿಯಾ ಜಿಲ್ಲೆಯಲ್ಲಿ  ನಿನ್ನೆ ರಾತ್ರಿ ಕೀರ್ತನ್ ಸಮಾರಂಭ ನಡೆಯುತ್ತಿತ್ತು, ಈ ವೇಳೆ ಧ್ವನಿ ವರ್ಧಕವನ್ನು ಜೋರಾಗಿ ಹಾಕಲಾಗಿತ್ತು, ಇದನ್ನು ವಿರೋಧಿಸಿ ಪ್ರತಿಭಟನೆ ನಡೆಯುತ್ತಿತ್ತು. ಶಂಭು ಚಂದ್ರ ದಾಸ್ ಎಂಬಾತನ ವಿರುದ್ಧ ಪ್ರತಿಭಟನೆ ನಡೆಸಿ ಆತನ ಮೇಲೆ ಹಲ್ಲೆ ಮಾಡಲಾಗಿತ್ತು.

ಈ ವೇಳೆ  ಆತನ ಮೇಲೆ ನಡೆಯುತ್ತಿದ್ದ ಹಲ್ಲೆ ತಪ್ಪಿಸಲು ಆತನ ಅತ್ತಿಗೆ ಮಾಯಾರಾಣಿ ಸಂತ್ರಾ ಅಲ್ಲಿಗೆ ಬಂದಿದ್ದಾರೆ. ಈ ವೇಳೆ ನಡೆದ ಜಗಳದಲ್ಲಿ ಆಕೆಯ ಹೊಟ್ಟೆಗೆ ಒದೆಯಲಾಗಿದೆ. ಇದರಿಂದ ಆಕೆ ಹೊಟ್ಟೆಯಲ್ಲಿದ್ದ ಮಗು ಸಾವನ್ನಪ್ಪಿದೆ ಎಂದು ಪೊಲೀಸರು ಹೇಳಿದ್ದಾರೆ. ಈ ಸಂಬಂಧ ಸ್ಥಳೀಯ ಬಿಜೆಪಿ ಮುಖಂಡ ಸೇರಿದಂತೆ ಐವರನ್ನು ಬಂಧಿಸಲಾಗಿದೆ.

ಮೊದಲಿಗೆ ಆಕೆಯನ್ನು ದುಬಾಲಿಯಾ ಗ್ರಾಮೀಣ ಆಸ್ಪತ್ರೆಗೆ ಕರೆದೊಯ್ಯಲಾಯಿತು, ನಂತರ ಕೃಷ್ಣನಗರ್ ಸರ್ದಾರ್ ಆಸ್ಪತ್ರೆಗೆ ದಾಖಲಿಸಲಾಗಿದೆ, ಹೊಟ್ಟೆಯಲ್ಲಿದ್ದ ಮಗು ಈ ವೇಳೆ ಸಾವನ್ನಪ್ಪಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಾಸ್ ಐವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾನೆ. ಈ ಸಂಬಂಧ ಐವರನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT