ಸಿಪಿಐ-ಎಂ 
ದೇಶ

ರಾಮಜಾಸ್ ಕಾಲೇಜಿನ ಘರ್ಷಣೆ ಸರ್ಕಾರಿ ಪ್ರಾಯೋಜಿತ ಅಸಹಿಷ್ಣುತೆಗೆ ಉದಾಹರಣೆ: ಸಿಪಿಐ-ಎಂ

ರಾಜಧಾನಿ ದೆಹಲಿಯ ರಾಮಜಾಸ್ ಕಾಲೇಜಿನಲ್ಲಿ ಎಬಿವಿಪಿ ಹಾಗೂ ಎಐಎಸ್ಎ ನಡುವಿನ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ-ಎಂ ಪ್ರತಿಕ್ರಿಯೆ ನೀಡಿದ್ದು, ಸರ್ಕಾರಿ ಪ್ರಾಯೋಜಿತ ಅಸಹಿಷ್ಣುತೆ ಎಂದಿದೆ.

ನವದೆಹಲಿ: ರಾಜಧಾನಿ ದೆಹಲಿಯ ರಾಮಜಾಸ್ ಕಾಲೇಜಿನಲ್ಲಿ ಎಬಿವಿಪಿ ಹಾಗೂ ಎಐಎಸ್ಎ ನಡುವಿನ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ-ಎಂ ಪ್ರತಿಕ್ರಿಯೆ ನೀಡಿದ್ದು, ಸರ್ಕಾರಿ ಪ್ರಾಯೋಜಿತ ಅಸಹಿಷ್ಣುತೆ ಎಂದು ಆರೋಪಿಸಿದೆ. 
ಫೆ.22 ರಂದು ಎಬಿವಿಪಿ ಹಾಗೂ ಎಐಎಸ್ಎ ವಿದ್ಯಾರ್ಥಿಗಳ ನಡುವೆ ರಾಮಜಾಸ್ ಕಾಲೇಜಿನಲ್ಲಿ ನಡೆದ ಘರ್ಷಣೆಯಲ್ಲಿ 12 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ರಾಷ್ಟ್ರದ್ರೋಹದ ಆರೋಪದಡಿ ಕಳೆದ ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಉಮರ್ ಖಾಲೀದ್ ಎಂಬ ಜೆಎನ್ ಯು ವಿದ್ಯಾರ್ಥಿಯ ಭಾಷಣವನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ವೇಳೆಯಲ್ಲಿ ಘರ್ಷಣೆ ಉಂಟಾಗಿತ್ತು. 
ರಾಮಜಾಸ್ ಕಾಲೇಜಿನಲ್ಲಿ ನಡೆದಿರುವ ಘರ್ಷಣೆಯನ್ನು ಸಿಪಿಐ-ಎಂ ಖಂಡಿಸುತ್ತದೆ. ಇದು ಸರ್ಕಾರಿ ಪ್ರಾಯೋಜಿತ ಅಸಹಿಷ್ಣುತೆಗೆ ಮತ್ತೊಂದು ಅತ್ಯುತ್ತಮ ಉದಾಹರಣೆ ಎಂದು ಸಿಪಿಐ-ಎಂ ಆರೋಪಿಸಿದೆ. ದೆಹಲಿ ಪೊಲೀಸಲು ಘರ್ಷಣೆ ನಡೆಯಲು ಅವಕಾಶ ನೀಡಿ ನಾಚಿಕೆಗೇಡಿನ ಕ್ರಮ ಅನುಸರಿಸಿದ್ದಾರೆ. ಪೊಲೀಸ್ ಠಾಣೆಗೆ ಹೋದ ಪ್ರಾಧ್ಯಾಪಕರ ಮೇಲೂ ಸಹ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಸಿಪಿಐ-ಎಂ ಪಕ್ಷ ಅಸಮಾಧಾನ ವ್ಯಕ್ತಪಡಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT