ಮಾಯಾವತಿ 
ದೇಶ

ಅಮಿತ್ ಶಾಗಿಂತ ದೊಡ್ಡ 'ಕಸಬ್' ಮತ್ತೊಬ್ಬರಿಲ್ಲ: ಮಾಯಾವತಿ

ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ಕಸಬ್ ಹೇಳಿಕೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬಹುಜನ ಸಮಾಜ ಪಕ್ಷ(ಬಿಎಸ್ಪಿ)ದ ಮುಖ್ಯಸ್ಥೆ ಮಾಯಾವತಿ....

ಅಂಬೇಡ್ಕರ್ ನಗರ: ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ಕಸಬ್ ಹೇಳಿಕೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬಹುಜನ ಸಮಾಜ ಪಕ್ಷ(ಬಿಎಸ್ಪಿ)ದ ಮುಖ್ಯಸ್ಥೆ ಮಾಯಾವತಿ ಅವರು, ಬಿಜೆಪಿ ಅಧ್ಯಕ್ಷರಿಗಿಂತ ದೊಡ್ಡ ಕಸಬ್(ಉಗ್ರ) ಮತ್ತೊಬ್ಬರಿಲ್ಲ ಎಂದು ಗುರುವಾರ ಹೇಳಿದ್ದಾರೆ.
ಇಂದು ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಅಮಿತ್ ಶಾ ಅವರಿಗಿಂತ ದೊಡ್ಡ ಕಸಬ್... ಉಗ್ರ ಮತ್ತೊಬ್ಬರಿಲ್ಲ ಎಂಬ ವಿಚಾರ ಈಡೀ ದೇಶಕ್ಕೆ ಗೊತ್ತಿದೆ. ಕಸಬ್ ಕುರಿತ ಅವರ ಹೇಳಿಕೆ ಕೇಸರಿ ಪಕ್ಷದ ಕೀಳುತನ ಪ್ರದರ್ಶಿಸುತ್ತದೆ ಎಂದಿದ್ದಾರೆ.
ಅಮಿತ್ ಶಾ ಅವರು ಉತ್ತರ ಪ್ರದೇಶವನ್ನು ಕಸಬ್ (ಕಾಂಗ್ರೆಸ್, ಸಮಾಜವಾದಿ ಪಕ್ಷ, ಬಿಎಸ್‍ಪಿ)ಯಿಂದ ಮುಕ್ತಗೊಳಿಸಿ ಎಂದು ಹೇಳಿದ್ದರು. ಶಾ ಹೇಳಿಕೆಗೆ ಕಾಂಗ್ರೆಸ್ ಸಹ ಆಕ್ಷೇಪ ವ್ಯಕ್ತಪಡಿಸಿದ್ದು, ಬಿಜೆಪಿಯ ಅಸಹ್ಯ ಯೋಚನೆಗಳೇ ಇಂಥಾ ಹೆಸರು ಹುಟ್ಟುಹಾಕುತ್ತಿವೆ. ಪಕ್ಷದ ಕೋಮುವಾದ ಮನಸ್ಥಿತಿಯನ್ನು ಇದು ತೋರಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ಮನು ಸಿಂಘ್ವಿ ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT