ಸಾವಿತ್ರಿಬಾಯಿ ಫುಲೆ ಪುಣೆ ವಿಶ್ವವಿದ್ಯಾಲಯ 
ದೇಶ

ಪುಣೆ ವಿವಿಯಲ್ಲಿ ಎಬಿವಿಪಿ, ಎಸ್'ಎಫ್ಐ ಕಾರ್ಯಕರ್ತರ ನಡುವೆ ಘರ್ಷಣೆ

ಸಾವಿತ್ರಿಬಾಯಿ ಫುಲೆ ಪುಣೆ ವಿಶ್ವವಿದ್ಯಾಲಯದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಾಗೂ ಸ್ಟೂಡೆಂಟ್ ಫೆಡರೇಷನ್ ಆಫ್ ಇಂಡಿಯಾ ಸಂಘಟನೆಗಳ ನಡುವೆ ಶುಕ್ರವಾರ ಸಂಜೆ ಘರ್ಷಣೆ ಏರ್ಪಟ್ಟಿತ್ತು...

ಪುಣೆ: ಸಾವಿತ್ರಿಬಾಯಿ ಫುಲೆ ಪುಣೆ ವಿಶ್ವವಿದ್ಯಾಲಯದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಾಗೂ ಸ್ಟೂಡೆಂಟ್ ಫೆಡರೇಷನ್ ಆಫ್ ಇಂಡಿಯಾ ಸಂಘಟನೆಗಳ ನಡುವೆ ಶುಕ್ರವಾರ ಸಂಜೆ ಘರ್ಷಣೆ ಏರ್ಪಟ್ಟಿತ್ತು. 
ದೆಹಲಿಯ ರಮ್ಜಾಸ್ ಕಾಲೇಜಿನ ಕಾರ್ಯಕ್ರಮವೊಂದಕ್ಕೆ ಜೆಎನ್ ಯು ವಿದ್ಯಾರ್ಥಿ ಉಮರ್ ಖಾಲಿದ್ ನನ್ನು ಆಹ್ನಾನಿಸಿದ್ದಕ್ಕೆ ವಿರೋಧ ವ್ಯಕ್ತಪಡಿಸಿ ಎಬಿವಿಪಿ ಕಾರ್ಯಕರ್ತರು ಕ್ಯಾಂಪಸ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಇದಕ್ಕೆ ಪ್ರತಿಯಾಗಿ ಎಸ್ಎಫ್ಐ ಕಾರ್ಯಕರ್ತರು ಎಬಿವಿಪಿ ವಿರುದ್ಧ ಪೋಸ್ಟರ್ ಗಳನ್ನು ವಿವಿಯ ಆವರಣದಲ್ಲಿ ಅಂಟಿಸಿದ್ದಾರೆ. 
ಈ ಪೋಸ್ಟರ್ ಗಳಿಗೆ ಎಬಿವಿಪಿ ವಿರೋಧ ವ್ಯಕ್ತಪಡಿಸಿತ್ತು. ನಂತರ ಎರಡೂ ಸಂಘಟನೆಗಳ ಕಾರ್ಯಕರ್ತರ ನಡುವೆ ಘರ್ಷಣೆ ಏರ್ಪಟ್ಟು, ಕೆಲ ಕಾಲ ವಿವಿಯ ಆವರಣದಲ್ಲಿ ಆತಂಕ ಸೃಷ್ಟಿಯಾಗಿತ್ತು. 
ಎರಡೂ ಸಂಘಟನೆಗಳ ಕಾರ್ಯಕರ್ತರು ಪೊಲೀಸ್ ಠಾಣೆಗೆ ಹೋಗಿ ಒಬ್ಬರ ಮೇಲೊಬ್ಬರು ದೂರನ್ನು ದಾಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 
ಎಬಿವಿಪಿ ಮುರ್ದಾಬಾದ್ ಎಂದು ಎಸ್ಎಫ್ಐ ಕಾರ್ಯಕರ್ತರು ಪೋಸ್ಟರ್ ಗಳನ್ನು ಅಂಟಿಸಿದ್ದರು. ಇದಕ್ಕೆ ನಾವು ವಿರೋಧ ವ್ಯಕ್ತಪಡಿಸಿದ್ದೆವು. ಈ ವೇಳೆ ಮಾತನಾಡಲು ಹೋದಾಗ ನಮ್ಮ ಮೇಲೆ ಅವರ ದಾಳಿ ಮಾಡಿದರು. ನಾವು ಯಾರ ಮೇಲೂ ದಾಳಿಮಾಡಿರಲಿಲ್ಲ. ನಮ್ಮ ಮೇಲೆ ದಾಳಇ ನಡೆದಿದೆ ಎಂದು ಎಬಿವಿಪಿ ಕಾರ್ಯಕರ್ತ ಪ್ರದೀಪ್ ಗವಾಡೆಯವರು ಹೇಳಿದ್ದಾರೆ. 
ಎಸ್ಎಫ್ಐ ಕಾರ್ಯಕರ್ತ ಮಾವೋ ಛವನ್ ಮಾತನಾಡಿ, ಯೋಧರ ಕುರಿತಂತೆ ಸೋಲಾಪುರ್ ಎಂಎಲ್'ಸಿ ಪ್ರಶಾಂತ್ ಪರಿಛರಕ್ ಅವರು ಅವಹೇಳನಕಾರಿ ಮಾತುಗಳನ್ನಾಡಿದ್ದು ಹಾಗೂ ದೆಹಲಿಯ ರಾಮ್ಜಾಸ್ ಕಾಲೇಜಿನಲ್ಲಿ ನಡೆದ ಹಿಂಸಾಚಾರ ಘಟನೆಗಳಿಗೆ ಸಂಬಂಧಿಸಿದಂತೆ ವಿವಿ ಕ್ಯಾಂಪಸ್ ನಲ್ಲಿ ಎಸ್ಎಫ್ಐ ಪ್ರತಿಭಟನೆ ನಡೆಸುತ್ತಿತ್ತು. ನಮ್ಮ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಎಬಿವಿಪಿ ಕಾರ್ಯಕರ್ತರು ಇದ್ದಕ್ಕಿದ್ದಂತೆ ಸ್ಥಳಕ್ಕೆ ಬಂದು ನಮ್ಮ ಕಾರ್ಯಕರ್ತರ ಮೇಲೆ ದಾಳಿ ಮಾಡಿದ್ದಾರೆಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT