ವಿರಾಟ್ ಕೊಹ್ಲಿ 
ದೇಶ

ಪ್ರವಾಹ ಸಂತ್ರಸ್ತರ ಪರಿಹಾರ ನಿಧಿಯಿಂದ ಕೊಹ್ಲಿಗೆ 47 ಲಕ್ಷ ರು. ನೀಡಿದ ಉತ್ತರಾಖಂಡ್ ಸರ್ಕಾರ

ಹರೀಶ್ ರಾವತ್ ನೇತೃತ್ವದ ಉತ್ತರಾಖಂಡ್ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. 2013 ರಲ್ಲಿ ಸಂಭವಿಸಿದ ಪ್ರವಾಹ ಸಂತ್ರಸ್ತರ ನಿಧಿಯಿಂದ ...

ನವದೆಹಲಿ: ಹರೀಶ್ ರಾವತ್ ನೇತೃತ್ವದ ಉತ್ತರಾಖಂಡ್ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. 2013 ರಲ್ಲಿ ಸಂಭವಿಸಿದ ಪ್ರವಾಹ ಸಂತ್ರಸ್ತರ ನಿಧಿಯಿಂದ ಉತ್ತರಾಖಂಡ್ ಸರ್ಕಾರ ಕ್ರಿಕೆಟಿಗ ವಿರಾಟ್ ಕೊಹ್ಲಿಗೆ 47 ಲಕ್ಷ ರು ಹಣ ನೀಡಿದೆ ಎಂಬುದು ಆರ್ ಟಿ ಆ ನಿಂದ ಬೆಳಕಿಗೆ ಬಂದಿದೆ.

ವಿಧಾನ ಸಭೆ ಚುನಾವಣೆಯ ಫಲಿತಾಂಶ ಮಾರ್ಚ್‌ 11ರಂದು ಪ್ರಕಟವಾಗಲಿದ್ದು. ಈ ಬೆಳವಣಿಗೆಯು ಹರೀಶ್‌ ರಾವತ್‌ ಸರಕಾರದ ಪಾಲಿಗೆ ಮತ್ತೊಂದು ವಿವಾದವಾಗಿ ಪರಿಣಮಿಸುತ್ತಿದೆ.

ಉತ್ತರಾಖಂಡ ಪ್ರವಾಸೋದ್ಯಮ ಪ್ರಚಾರ ರಾಯಭಾರಿಯಾಗಿ 60 ಸೆಕೆಂಡ್‌ಗಳ ವೀಡಿಯೊದಲ್ಲಿ ಕಾಣಿಸಿಕೊಂಡಿರುವುದಕ್ಕಾಗಿ ಕೊಹ್ಲಿ ಅವರಿಗೆ ಈ ಮೊತ್ತ ಪಾವತಿಸಲಾಗಿದೆ ಎಂದು ಬಿಜೆಪಿ ಸದಸ್ಯರೊಬ್ಬರು ಮಾಹಿತಿ ಹಕ್ಕು ಕಾಯಿದೆಯಡಿ ಸಲ್ಲಿಸಿದ್ದ ಅರ್ಜಿಯಿಂದ ತಿಳಿದು ಬಂದಿದೆ.

ಕೊಹ್ಲಿ ಅವರಿಗೆ ಈ ಸಂಬಂಧ ಯಾವುದೇ ಹಣ ವರ್ಗಾವಣೆ ವ್ಯವಹಾರ ನಡೆದಿಲ್ಲ ಎಂದು ಕೊಹ್ಲಿ ಅವರ ಕಾರ್ನರ್‌ಸ್ಟೋನ್‌ ಸ್ಪೋರ್ಟ್‌ ಅಂಡ್‌ ಎಂಟರ್‌ಟೈನ್ಮೆಂಟ್‌ ನ ಸಿಇಒ ಬಂಟಿ ಸಜ್ದೇಹ್‌ ಹೇಳಿದ್ದಾರೆ.

ರಾಜ್ಯದ ಪ್ರವಾಸೋದ್ಯಮ ಕುಸಿದಿದ್ದು, ಆರ್ಥಿಕತೆಗೂ ಪೆಟ್ಟು ಬಿದ್ದಿದೆ. ಪ್ರಸಿದ್ಧ ಜನಪ್ರಿಯ ವ್ಯಕ್ತಿಯನ್ನು ಪ್ರವಾಸಿತಾಣಗಳ ಪ್ರಚಾರಕ್ಕೆ ಬಳಸಿಕೊಂಡರೆ ತಪ್ಪೇನು ಎಂದು ಮುಖ್ಯಮಂತ್ರಿಯ ಮಾಧ್ಯಮ ಸಲಹೆಗಾರ ಸುರೇಂದರ್‌ ಕುಮಾರ್‌ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?