ಸಂಗ್ರಹ ಚಿತ್ರ 
ದೇಶ

ಗುಜರಾತ್'ನಲ್ಲಿ ಬಾಂಬ್ ಸ್ಫೋಟಕ್ಕೆ ಭಾರೀ ಸಂಚು: 2 ಇಸಿಸ್ ಉಗ್ರರನ್ನು ಬಂಧಿಸಿದ ಅಧಿಕಾರಿಗಳು

ಗುಜರಾತ್'ನಲ್ಲಿ ದೊಡ್ಡ ಮಟ್ಟದಲ್ಲಿ ವಿಧ್ವಂಕ ಕೃತ್ಯವೆಸಗಲು ಭಾರೀ ಸಂಚು ರೂಪಿಸಿದ್ದ ಇಸಿಸ್ ಉಗ್ರ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಗುಜರಾತ್ ಉಗ್ರ ನಿಗ್ರಹ ತಂಡದ ಅಧಿಕಾರಿಗಳು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ...

ರಾಜ್ಕೋಟ್: ಗುಜರಾತ್'ನಲ್ಲಿ ದೊಡ್ಡ ಮಟ್ಟದಲ್ಲಿ ವಿಧ್ವಂಕ ಕೃತ್ಯವೆಸಗಲು ಭಾರೀ ಸಂಚು ರೂಪಿಸಿದ್ದ ಇಸಿಸ್ ಉಗ್ರ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಗುಜರಾತ್ ಉಗ್ರ ನಿಗ್ರಹ ತಂಡದ ಅಧಿಕಾರಿಗಳು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ. 
ಬಂಧಿತ ಉಗ್ರರಿಬ್ಬರೂ ಸಹೋದರರಾಗಿದ್ದು, ಗುಜರಾತ್ ನ ಛೋಟಿಲಾ ಮಂದಿರ್ ನಲ್ಲಿ ಬಾಂಬ್ ಸ್ಫೋಟಕ್ಕೆ ಭಾರೀ ಸಂಚು ರೂಪಿಸಿದ್ದರೆಂದು ತಿಳಿದುಬಂದಿದೆ.
ನಾಸಿಮ್ ಮತ್ತು ನಿತಿನ ಬಂಧಿತ ಉಗ್ರರಾಗಿದ್ದು, ರಾಜ್ಕೋಟ್ ಹಾಗೂ ಭವನಗರದಲ್ಲಿ ಗುಜರಾತ್ ಉಗ್ರ ನಿಗ್ರಹ ತಂಡದ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರನ್ನೂ ಬಂಧನಕ್ಕೊಳಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 
2 ವರ್ಷಗಳ ಹಿಂದೆ ಇಸಿಸ್ ಉಗ್ರರಿಂದ ಅಪಹರಣಕ್ಕೊಳಗಾಗಿ ಉಗ್ರರ ಕಪಿಮುಷ್ಠಿಯಲ್ಲಿ ಬಂಧಿಯಾಗಿದ್ದ ಡಾ.ರಾಮಮೂರ್ತಿ ಅವರು ಇತ್ತೀಚೆಗಷ್ಟೇ ಸ್ಫೋಟಕ ಮಾಹಿತಿಗಳನ್ನು ಬಹಿರಂಗಪಡಿಸಿದ್ದರು. ಉಗ್ರ ಸಂಘಟನೆಯ ಸಂಚನ್ನು ಮತ್ತು ಅಲ್ಲಿ ತಾವು ಅನುಭವಿಸಿದ ನೋವನ್ನು ಎಳೆ ಎಳೆಯಾಗಿ ಬಿಟ್ಟಿಟ್ಟಿದ್ದರು. ಇಸ್ಲಾಮಿಕ್ ಸ್ಟೇಟ್ ಉಗ್ರರಿಗೆ ಭಾರತದ ಕುರಿತಂತೆ ಸಾಕಷ್ಟು ಮಾಹಿತಿ ತಿಳಿದಿದೆ. 
ಇಲ್ಲಿನ ರಾಜಕೀಯ, ಧಾರ್ಮಿಕ ಮತ್ತು ಸಾಮಾಜಿಕ ಸ್ಛತಿಗತಿಗಳನ್ನು ಅವರು ಚೆನ್ನಾಗಿ ತಿಳಿದಿದ್ದಾರೆ. ಅಲ್ಲಿರುವವರೆಲ್ಲರೂ ಬಹುತೇಕ ವಿದ್ಯಾವಂತರು. ಹೀಗಾಗಿ ಅವರಿಗೆ ಇಲ್ಲಿನ ಅಭಿವೃದ್ದಿ, ಶಿಕ್ಷಣ ಮತ್ತ ಆರ್ಥಿಕತೆಯನ್ನು ಚೆನ್ನಾಗಿ ತಿಳಿದಿದ್ದಾರೆ. ಅಂತೆಯೇ ಭಾರತದ ಮೇಲೆ ತಮ್ಮ ಸಿದ್ಧಾಂತಗಳನ್ನು ಹೇರಲು ಸಾಕಷ್ಟು ಯೋಜನೆಗಳನ್ನು ರೂಪಿಸಿದ್ದಾರೆ. ಅಲ್ಲದೆ ಇಲ್ಲಿಯೂ ಸಾಕಷ್ಟು ವಿಧ್ವಂಸಕ ಕೃತ್ಯಗಳನ್ನು ನಡೆಸಲು ಸಂಚು ರೂಪಿಸುತ್ತಿದ್ದಾರೆ ಎಂದು ಹೇಳಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT