ಸಂಗ್ರಹ ಚಿತ್ರ 
ದೇಶ

ಗುಜರಾತ್'ನಲ್ಲಿ ಬಾಂಬ್ ಸ್ಫೋಟಕ್ಕೆ ಭಾರೀ ಸಂಚು: 2 ಇಸಿಸ್ ಉಗ್ರರನ್ನು ಬಂಧಿಸಿದ ಅಧಿಕಾರಿಗಳು

ಗುಜರಾತ್'ನಲ್ಲಿ ದೊಡ್ಡ ಮಟ್ಟದಲ್ಲಿ ವಿಧ್ವಂಕ ಕೃತ್ಯವೆಸಗಲು ಭಾರೀ ಸಂಚು ರೂಪಿಸಿದ್ದ ಇಸಿಸ್ ಉಗ್ರ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಗುಜರಾತ್ ಉಗ್ರ ನಿಗ್ರಹ ತಂಡದ ಅಧಿಕಾರಿಗಳು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ...

ರಾಜ್ಕೋಟ್: ಗುಜರಾತ್'ನಲ್ಲಿ ದೊಡ್ಡ ಮಟ್ಟದಲ್ಲಿ ವಿಧ್ವಂಕ ಕೃತ್ಯವೆಸಗಲು ಭಾರೀ ಸಂಚು ರೂಪಿಸಿದ್ದ ಇಸಿಸ್ ಉಗ್ರ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಗುಜರಾತ್ ಉಗ್ರ ನಿಗ್ರಹ ತಂಡದ ಅಧಿಕಾರಿಗಳು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ. 
ಬಂಧಿತ ಉಗ್ರರಿಬ್ಬರೂ ಸಹೋದರರಾಗಿದ್ದು, ಗುಜರಾತ್ ನ ಛೋಟಿಲಾ ಮಂದಿರ್ ನಲ್ಲಿ ಬಾಂಬ್ ಸ್ಫೋಟಕ್ಕೆ ಭಾರೀ ಸಂಚು ರೂಪಿಸಿದ್ದರೆಂದು ತಿಳಿದುಬಂದಿದೆ.
ನಾಸಿಮ್ ಮತ್ತು ನಿತಿನ ಬಂಧಿತ ಉಗ್ರರಾಗಿದ್ದು, ರಾಜ್ಕೋಟ್ ಹಾಗೂ ಭವನಗರದಲ್ಲಿ ಗುಜರಾತ್ ಉಗ್ರ ನಿಗ್ರಹ ತಂಡದ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರನ್ನೂ ಬಂಧನಕ್ಕೊಳಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 
2 ವರ್ಷಗಳ ಹಿಂದೆ ಇಸಿಸ್ ಉಗ್ರರಿಂದ ಅಪಹರಣಕ್ಕೊಳಗಾಗಿ ಉಗ್ರರ ಕಪಿಮುಷ್ಠಿಯಲ್ಲಿ ಬಂಧಿಯಾಗಿದ್ದ ಡಾ.ರಾಮಮೂರ್ತಿ ಅವರು ಇತ್ತೀಚೆಗಷ್ಟೇ ಸ್ಫೋಟಕ ಮಾಹಿತಿಗಳನ್ನು ಬಹಿರಂಗಪಡಿಸಿದ್ದರು. ಉಗ್ರ ಸಂಘಟನೆಯ ಸಂಚನ್ನು ಮತ್ತು ಅಲ್ಲಿ ತಾವು ಅನುಭವಿಸಿದ ನೋವನ್ನು ಎಳೆ ಎಳೆಯಾಗಿ ಬಿಟ್ಟಿಟ್ಟಿದ್ದರು. ಇಸ್ಲಾಮಿಕ್ ಸ್ಟೇಟ್ ಉಗ್ರರಿಗೆ ಭಾರತದ ಕುರಿತಂತೆ ಸಾಕಷ್ಟು ಮಾಹಿತಿ ತಿಳಿದಿದೆ. 
ಇಲ್ಲಿನ ರಾಜಕೀಯ, ಧಾರ್ಮಿಕ ಮತ್ತು ಸಾಮಾಜಿಕ ಸ್ಛತಿಗತಿಗಳನ್ನು ಅವರು ಚೆನ್ನಾಗಿ ತಿಳಿದಿದ್ದಾರೆ. ಅಲ್ಲಿರುವವರೆಲ್ಲರೂ ಬಹುತೇಕ ವಿದ್ಯಾವಂತರು. ಹೀಗಾಗಿ ಅವರಿಗೆ ಇಲ್ಲಿನ ಅಭಿವೃದ್ದಿ, ಶಿಕ್ಷಣ ಮತ್ತ ಆರ್ಥಿಕತೆಯನ್ನು ಚೆನ್ನಾಗಿ ತಿಳಿದಿದ್ದಾರೆ. ಅಂತೆಯೇ ಭಾರತದ ಮೇಲೆ ತಮ್ಮ ಸಿದ್ಧಾಂತಗಳನ್ನು ಹೇರಲು ಸಾಕಷ್ಟು ಯೋಜನೆಗಳನ್ನು ರೂಪಿಸಿದ್ದಾರೆ. ಅಲ್ಲದೆ ಇಲ್ಲಿಯೂ ಸಾಕಷ್ಟು ವಿಧ್ವಂಸಕ ಕೃತ್ಯಗಳನ್ನು ನಡೆಸಲು ಸಂಚು ರೂಪಿಸುತ್ತಿದ್ದಾರೆ ಎಂದು ಹೇಳಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT