ಮಾಯಾವತಿ 
ದೇಶ

ಬಿಎಸ್ಪಿ ಅಧಿಕಾರಕ್ಕೆ ಬಂದ್ರೆ ಉತ್ತರ ಪ್ರದೇಶ 4 ರಾಜ್ಯಗಳಾಗಿ ವಿಭಜನೆ: ಮಾಯಾವತಿ

ಉತ್ತರ ಪ್ರದೇಶ ವಿಭಜನೆ ವಿಚಾರವನ್ನು ಮತ್ತೆ ಪ್ರಸ್ತಾಪಿಸಿರುವ ಬಹುಜನ ಸಮಾಜವಾದಿ ಪಕ್ಷದ ನಾಯಕಿ ಮಾಯಾವತಿ, ತಮ್ಮ ಪಕ್ಷ....

ಲಖನೌ: ಉತ್ತರ ಪ್ರದೇಶ ವಿಭಜನೆ ವಿಚಾರವನ್ನು ಮತ್ತೆ ಪ್ರಸ್ತಾಪಿಸಿರುವ ಬಹುಜನ ಸಮಾಜವಾದಿ ಪಕ್ಷದ ನಾಯಕಿ ಮಾಯಾವತಿ, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಪೂರ್ವಾಂಚಲ ಸೇರಿದಂತೆ ನಾಲ್ಕು ಸಣ್ಣ ಸಣ್ಣ ರಾಜ್ಯಗಳನ್ನಾಗಿ ವಿಭಜಿಸಲಾಗುವುದು ಎಂದು ಸೋಮವಾರ ಹೇಳಿದ್ದಾರೆ.
ಇಂದು ಗೋರಖ್ ಪುರದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಮಾಯಾವತಿ, ಗೋರಖ್ ಪುರ ಪೂರ್ವ ಉತ್ತರ ಪ್ರದೇಶ ಅಥವ ಪೂರ್ವಾಂಚಲದ ಕೇಂದ್ರವಾಗಿದೆ. ಆದರೆ ಅಭಿವೃದ್ಧಿ ವಿಚಾರದಲ್ಲಿ ಇದನ್ನು ಕಡೆಗಣಿಸಲಾಗುತ್ತಿದೆ ಎಂದಿದ್ದಾರೆ.
'ಯಾವುದೇ ಅಭಿವೃದ್ಧಿ ಹೊಂದದ ನಿಮ್ಮ ಜಿಲ್ಲೆ ಪ್ರತ್ಯೇಕ ರಾಜ್ಯವಾಗುವವರೆಗೆ ಅಭಿವೃದ್ಧಿ ಕಾಣಲ್ಲ. ಬಿಎಸ್ಪಿ ಅಧಿಕಾರಕ್ಕೆ ಬಂದರೆ ಪ್ರತ್ಯೇಕ ರಾಜ್ಯ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕ್ರಮ ತೆಗೆದುಕೊಳ್ಳಲಾಗುವುದು' ಎಂದು ಮಾಯಾವತಿ ಮತದಾರರಿಗೆ ಭರವಸೆ ನೀಡಿದರು. ಅಲ್ಲದೆ ಪೂರ್ವಾಂಚಲ ಪ್ರತ್ಯೇಕ ರಾಜ್ಯಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್ ಮತ್ತು ಬಿಜೆಪಿಗೆ ನೀವು ಈ ಚುನಾವಣೆಯಲ್ಲಿ ಪಾಠ ಕಲಿಸಿ ಎಂದು ಕರೆ ನೀಡಿದ್ದಾರೆ. 
ಈ ಪ್ರದೇಶದಲ್ಲಿ ಮಾರ್ಚ್ 4ರಂದು ಆರನೇ ಹಂತದ ಮತದಾನ ನಡೆಯಲಿದೆ.
2011ರಲ್ಲಿ ಮಾಯಾವತಿ ಅವರು ಉತ್ತರ ಪ್ರದೇಶವನ್ನು ಪೂರ್ವಾಂಚ, ಬುಂದೇಲ್‌ಖಂಡ, ಅವಧ್ ಹಾಗೂ ಪಶ್ಚಿಮ ಉತ್ತರ ಪ್ರದೇಶ ಎಂದು ನಾಲ್ಕು ರಾಜ್ಯಗಳಾಗಿ ವಿಭಜನೆ ಮಾಡುವ ಮಸೂದೆಯನ್ನು ವಿಧಾಸಭೆಯಲ್ಲಿ ಅಂಗೀಕರಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಕ್ಕಳ ಸಾವಿಗೆ ಪ್ರತೀಕಾರ: ಇಸ್ರೇಲ್-ಅಮೆರಿಕ, ಗಲ್ಫ್ ದೇಶಗಳ ಮೇಲೆ ದಾಳಿ ನಿಲ್ಲಲ್ಲ; ಇರಾನ್ ಹೊಸ ಸರ್ವೋಚ್ಛ ನಾಯಕ ವಾರ್ನಿಂಗ್!

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ನಮ್ಮ ಶಕ್ತಿ ಇರಾನ್ ನಿರ್ನಾಮಕ್ಕೆ ಮೀಸಲು, ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್ ಗಳಿಗೆ ಬೆಂಗಾವಲು ನೀಡಲ್ಲ: ಅಮೆರಿಕ

ಮಾರ್ಚ್ 16 ರಂದು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

SCROLL FOR NEXT