ಡಿಯೋರಿಯಾ: ಉತ್ತರಪ್ರದೇಶದಲ್ಲಿರುವ ಬಡವರನ್ನು ಗುರಿ ಮಾಡುವುದನ್ನು ಬಿಟ್ಟು, ತಲೆಮರೆಸಿಕೊಂಡಿರುವ ಮದ್ಯದ ದೊರೆ ವಿಜಯ್ ಮಲ್ಯ ಅವರನ್ನು ಗುರಿ ಮಾಡಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ರಾಹುಲ್ ಗಾಂಧಿಯವರು ಸೋಮವಾರ ಹೇಳಿದ್ದಾರೆ.
ಉತ್ತರಪ್ರದೇಶ ಡಿಯೋರಿಯಾದಲ್ಲಿ ಆಯೋಜಿಸಲಾಗಿದ್ದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿರುವ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಕಿಡಿಕಾರಿದ್ದಾರೆ.
ಸರ್ಕಾರೇತರ ಬ್ಯಾಂಕ್ ಗಳಿಗೆ ಪಂಗನಾಮ ಹಾಕಿ ತಲೆಮರೆಸಿಕೊಂಡಿರುವ ಮದ್ಯದ ದೊರೆಯನ್ನು ರಕ್ಷಣೆ ಮಾಡುವುದನ್ನು ನಿಲ್ಲಿಸಿ, ಬಡವರು ಹಾಗೂ ಉತ್ತರಪ್ರದೇಶದಲ್ಲಿರುವ ರೈತರಿಗಾಗಿ ಏನಾದಾರೂ ಮಾಡಿ. ಉತ್ತರಪ್ರದೇಶದ ಜನತೆಗೆ ಉದ್ಯೋಗ ದೊರಕಿಸಿಕೊಡುವ ಹಾಗೂ ಅವರ ಅಗತ್ಯಕ್ಕೆ ತಕ್ಕಂತೆ ಕೆಲಸ ಮಾಡುವ ಸರ್ಕಾರ ಬೇಕಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಸ್ವದೇಶದಲ್ಲಿ ಸಾಲ ಮಾಡಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ವಿಜಯ್ ಮಲ್ಯ ಅವರ ರೂ.1200 ಕೋಟಿ ಸಾಲವನ್ನು ಸರ್ಕಾರ ಯಾವ ಕಾರಣಕ್ಕೆ ಮನ್ನಾ ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ.
ಪಂಜರಾಜ್ಯಗಳ ಪೈಕಿ ಉತ್ತರಪ್ರದೇಶ ರಾಜ್ಯದಲ್ಲಿ ಈಗಾಗಲೇ ಚುನಾವಣೆ ಆರಂಭಗೊಂಡಿದ್ದು, 7ಹಂತಗಳ ಪೈಕಿ ಈಗಾಗಲೇ 5ನೇ ಹಂತದ ಚುನಾವಣಾ ಪ್ರಕ್ರಿಯೆಗಳು ಪೂರ್ಣಗೊಂಡಿವೆ. 6ನೇ ಹಂತದ ಚುನಾವಣೆ ಮಾರ್ಚ್ 6 ರಂದು ಆರಂಭಗೊಳ್ಳಲಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos