ರಾಹುಲ್ ಗಾಂಧಿ 
ದೇಶ

ಬಡವರನ್ನು ಬಿಟ್ಟು, ವಿಜಯ್ ಮಲ್ಯರನ್ನು ಗುರಿ ಮಾಡಿ: ಪ್ರಧಾನಿ ಮೋದಿಗೆ ರಾಹುಲ್

ಉತ್ತರಪ್ರದೇಶದಲ್ಲಿರುವ ಬಡವರನ್ನು ಗುರಿ ಮಾಡುವುದನ್ನು ಬಿಟ್ಟು, ತಲೆಮರೆಸಿಕೊಂಡಿರುವ ಮದ್ಯದ ದೊರೆ ವಿಜಯ್ ಮಲ್ಯ ಅವರನ್ನು ಗುರಿ ಮಾಡಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ರಾಹುಲ್ ಗಾಂಧಿಯವರು ಸೋಮವಾರ...

ಡಿಯೋರಿಯಾ: ಉತ್ತರಪ್ರದೇಶದಲ್ಲಿರುವ ಬಡವರನ್ನು ಗುರಿ ಮಾಡುವುದನ್ನು ಬಿಟ್ಟು, ತಲೆಮರೆಸಿಕೊಂಡಿರುವ ಮದ್ಯದ ದೊರೆ ವಿಜಯ್ ಮಲ್ಯ ಅವರನ್ನು ಗುರಿ ಮಾಡಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ರಾಹುಲ್ ಗಾಂಧಿಯವರು ಸೋಮವಾರ ಹೇಳಿದ್ದಾರೆ. 
ಉತ್ತರಪ್ರದೇಶ ಡಿಯೋರಿಯಾದಲ್ಲಿ ಆಯೋಜಿಸಲಾಗಿದ್ದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿರುವ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಕಿಡಿಕಾರಿದ್ದಾರೆ. 
ಸರ್ಕಾರೇತರ ಬ್ಯಾಂಕ್ ಗಳಿಗೆ ಪಂಗನಾಮ ಹಾಕಿ ತಲೆಮರೆಸಿಕೊಂಡಿರುವ ಮದ್ಯದ ದೊರೆಯನ್ನು ರಕ್ಷಣೆ ಮಾಡುವುದನ್ನು ನಿಲ್ಲಿಸಿ, ಬಡವರು ಹಾಗೂ ಉತ್ತರಪ್ರದೇಶದಲ್ಲಿರುವ ರೈತರಿಗಾಗಿ ಏನಾದಾರೂ ಮಾಡಿ. ಉತ್ತರಪ್ರದೇಶದ ಜನತೆಗೆ ಉದ್ಯೋಗ ದೊರಕಿಸಿಕೊಡುವ ಹಾಗೂ ಅವರ ಅಗತ್ಯಕ್ಕೆ ತಕ್ಕಂತೆ ಕೆಲಸ ಮಾಡುವ ಸರ್ಕಾರ ಬೇಕಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಸ್ವದೇಶದಲ್ಲಿ ಸಾಲ ಮಾಡಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ವಿಜಯ್ ಮಲ್ಯ ಅವರ ರೂ.1200 ಕೋಟಿ ಸಾಲವನ್ನು ಸರ್ಕಾರ ಯಾವ ಕಾರಣಕ್ಕೆ ಮನ್ನಾ ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ. 
ಪಂಜರಾಜ್ಯಗಳ ಪೈಕಿ ಉತ್ತರಪ್ರದೇಶ ರಾಜ್ಯದಲ್ಲಿ ಈಗಾಗಲೇ ಚುನಾವಣೆ ಆರಂಭಗೊಂಡಿದ್ದು, 7ಹಂತಗಳ ಪೈಕಿ ಈಗಾಗಲೇ 5ನೇ ಹಂತದ ಚುನಾವಣಾ ಪ್ರಕ್ರಿಯೆಗಳು ಪೂರ್ಣಗೊಂಡಿವೆ. 6ನೇ ಹಂತದ ಚುನಾವಣೆ ಮಾರ್ಚ್ 6 ರಂದು ಆರಂಭಗೊಳ್ಳಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT