ಪಾಕಿಸ್ತಾನ ಹೈಕಮಿಷನರ್ ಅಬ್ದುಲ್ ಬಸಿತ್ 
ದೇಶ

ಸೌಹಾರ್ದತೆಯ ಸಂಕೇತ: 39 ಪಾಕಿಸ್ತಾನಿ ಖೈದಿಗಳನ್ನು ಬಿಡುಗಡೆ ಮಾಡಲಿರುವ ಭಾರತ

ಪಾಕಿಸ್ತಾನದ ಶಾಂತಿ ಪ್ರಸ್ತಾವನೆಗೆ ಪೂರಕವಾಗಿ ಸ್ಪಂದಿಸಿರುವ ಭಾರತ, ಪಾಕಿಸ್ತಾನದ 39 ಖೈದಿಗಳನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ.

ನವದೆಹಲಿ: ಪಾಕಿಸ್ತಾನದ ಶಾಂತಿ ಪ್ರಸ್ತಾವನೆಗೆ ಪೂರಕವಾಗಿ ಸ್ಪಂದಿಸಿರುವ ಭಾರತ, ಪಾಕಿಸ್ತಾನದ 39 ಖೈದಿಗಳನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ. 
ಶಿಕ್ಷೆಯನ್ನು ಪೂರ್ಣಗೊಳಿಸಿರುವ 21 ಖೈದಿಗಳು ಹಾಗೂ 18 ಮೀನುಗಾರರನ್ನು ಭಾರತ ಬಿಡುಗಡೆ ಮಾಡಲಿದ್ದು, ಬಾಬೂಲಾಲ್ ಚೌಹಾಣ್ ಎಂಬ ಭಾರತೀಯ ಯೋಧನನ್ನು ಪಾಕಿಸ್ತಾನ ಬಿಡುಗಡೆ ಮಾಡಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ. 
ಈ ಬಗ್ಗೆ ಪಾಕಿಸ್ತಾನ ಹೈಕಮಿಷನರ್ ಅಬ್ದುಲ್ ಬಸಿತ್ ಪ್ರತಿಕ್ರಿಯೆ ನೀಡಿದ್ದು, ಭಾರತ ಖೈದಿಗಳನ್ನು ಬಿಡುಗಡೆ ಮಾಡಲಿದೆ ಎಂಬ ವಿಶ್ವಾಸವಿತ್ತು. ಈ ಪೈಕಿ 33 ಖೈದಿಗಳ ಶಿಕ್ಷೆಯ ಅವಧಿ ಮುಕ್ತಾಯಗೊಂಡಿದೆ, ಮಾ.1 ರಂದು ಖೈದಿಗಳನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಅಬ್ದುಲ್ ಬಸಿತ್ ತಿಳಿಸಿದ್ದಾರೆ. 
ಇದೇ ವೇಳೆ ಜೆಯುಡಿ ಉಗ್ರ ಸಂಘಟನೆ ಮುಖ್ಯಸ್ಥ ಹಫೀಜ್ ಸಯೀದ್ ನ್ನು ಗೃಹ ಬಂಧನಲ್ಲಿರಿಸಿರುವುದರ ಬಗ್ಗೆ ಜಾಗರೂಕತೆಯಿಂದ ಪ್ರತಿಕ್ರಿಯೆ ನೀಡಿದ್ದ ಭಾರತ, ಈಗ 39 ಪಾಕಿಸ್ತಾನಿ ಖೈದಿಗಳನ್ನು ಬಿಡುಗಡೆ ಮಾಡಲು ನಿರ್ಧರಿಸಿದ್ದು, ಪಾಕಿಸ್ತಾನದೊಂದಿಗೆ ಮತ್ತೆ ದ್ವಿಪಕ್ಷೀಯ ಮಾತುಕತೆ ನಡೆಸುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಾಂತಿ ಮಾತುಕತೆಗೆ ಅಡ್ಡಿ: Iran ಸಂಧಾನಕಾರರ ಹತ್ಯೆಗೆ Israel ಭಾರೀ ಸಂಚು; ಮಧ್ಯಪ್ರಾಚ್ಯ ರಾಷ್ಟ್ರಗಳ ಮೂಲಕ ಎಚ್ಚರಿಕೆ ರವಾನಿಸಿದ ಅಮೆರಿಕಾ..!

ಚಿಕ್ಕಬಳ್ಳಾಪುರ: ಕ್ವಾರಿಯಲ್ಲಿ ಡ್ರಿಲ್ಲಿಂಗ್ ವೇಳೆ ಸ್ಫೋಟ, ಕಾರ್ಮಿಕ ಸಾವು

Uttar Pradesh: ಟೋಲ್ ಡಿವೈಡರ್ ಗೆ LPG ಟ್ಯಾಂಕರ್ ಢಿಕ್ಕಿ, ಸ್ಫೋಟ ಕನಿಷ್ಠ 4 ಸಜೀವ ದಹನ, Video Viral

ಅಂತರಾಷ್ಟ್ರೀಯ ವಿಮಾನ ಪ್ರಯಾಣಿಕರಿಗೆ ಗುಡ್‌ನ್ಯೂಸ್: Fuel surcharge ಇಳಿಸಿದ Air India; ವಿಮಾನ ಟಿಕೆಟ್ ದರವೂ ಇಳಿಕೆ ಸಾಧ್ಯತೆ..!

ಬೆಳಗಾವಿ: 300 ವರ್ಷಗಳ ಪುರಾತನ ಮೆಟ್ಟಿಲು ಬಾವಿಗೆ ಮರುಜೀವ, Video