ಪಾಕಿಸ್ತಾನ ಹೈಕಮಿಷನರ್ ಅಬ್ದುಲ್ ಬಸಿತ್ 
ದೇಶ

ಸೌಹಾರ್ದತೆಯ ಸಂಕೇತ: 39 ಪಾಕಿಸ್ತಾನಿ ಖೈದಿಗಳನ್ನು ಬಿಡುಗಡೆ ಮಾಡಲಿರುವ ಭಾರತ

ಪಾಕಿಸ್ತಾನದ ಶಾಂತಿ ಪ್ರಸ್ತಾವನೆಗೆ ಪೂರಕವಾಗಿ ಸ್ಪಂದಿಸಿರುವ ಭಾರತ, ಪಾಕಿಸ್ತಾನದ 39 ಖೈದಿಗಳನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ.

ನವದೆಹಲಿ: ಪಾಕಿಸ್ತಾನದ ಶಾಂತಿ ಪ್ರಸ್ತಾವನೆಗೆ ಪೂರಕವಾಗಿ ಸ್ಪಂದಿಸಿರುವ ಭಾರತ, ಪಾಕಿಸ್ತಾನದ 39 ಖೈದಿಗಳನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ. 
ಶಿಕ್ಷೆಯನ್ನು ಪೂರ್ಣಗೊಳಿಸಿರುವ 21 ಖೈದಿಗಳು ಹಾಗೂ 18 ಮೀನುಗಾರರನ್ನು ಭಾರತ ಬಿಡುಗಡೆ ಮಾಡಲಿದ್ದು, ಬಾಬೂಲಾಲ್ ಚೌಹಾಣ್ ಎಂಬ ಭಾರತೀಯ ಯೋಧನನ್ನು ಪಾಕಿಸ್ತಾನ ಬಿಡುಗಡೆ ಮಾಡಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ. 
ಈ ಬಗ್ಗೆ ಪಾಕಿಸ್ತಾನ ಹೈಕಮಿಷನರ್ ಅಬ್ದುಲ್ ಬಸಿತ್ ಪ್ರತಿಕ್ರಿಯೆ ನೀಡಿದ್ದು, ಭಾರತ ಖೈದಿಗಳನ್ನು ಬಿಡುಗಡೆ ಮಾಡಲಿದೆ ಎಂಬ ವಿಶ್ವಾಸವಿತ್ತು. ಈ ಪೈಕಿ 33 ಖೈದಿಗಳ ಶಿಕ್ಷೆಯ ಅವಧಿ ಮುಕ್ತಾಯಗೊಂಡಿದೆ, ಮಾ.1 ರಂದು ಖೈದಿಗಳನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಅಬ್ದುಲ್ ಬಸಿತ್ ತಿಳಿಸಿದ್ದಾರೆ. 
ಇದೇ ವೇಳೆ ಜೆಯುಡಿ ಉಗ್ರ ಸಂಘಟನೆ ಮುಖ್ಯಸ್ಥ ಹಫೀಜ್ ಸಯೀದ್ ನ್ನು ಗೃಹ ಬಂಧನಲ್ಲಿರಿಸಿರುವುದರ ಬಗ್ಗೆ ಜಾಗರೂಕತೆಯಿಂದ ಪ್ರತಿಕ್ರಿಯೆ ನೀಡಿದ್ದ ಭಾರತ, ಈಗ 39 ಪಾಕಿಸ್ತಾನಿ ಖೈದಿಗಳನ್ನು ಬಿಡುಗಡೆ ಮಾಡಲು ನಿರ್ಧರಿಸಿದ್ದು, ಪಾಕಿಸ್ತಾನದೊಂದಿಗೆ ಮತ್ತೆ ದ್ವಿಪಕ್ಷೀಯ ಮಾತುಕತೆ ನಡೆಸುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT