ಕನ್ಸಾಸ್ ಶೂಟಿಂಗ್: ಭಾರತೀಯ ಟೆಕ್ಕಿ ಶ್ರೀನಿವಾಸ್ ಮೃತದೇಹ ಹೈದರಾಬಾದ್'ಗೆ 
ದೇಶ

ಕನ್ಸಾಸ್ ಶೂಟಿಂಗ್: ಹೈದರಾಬಾದ್ ನಲ್ಲಿ ಟೆಕ್ಕಿ ಶ್ರೀನಿವಾಸ್ ಅಂತ್ಯ ಸಂಸ್ಕಾರ

ಅಮೆರಿಕಾದ ಕನ್ಸಾಸ್ ನಗರದ ಬಾರೊಂದರಲ್ಲಿ ನಡೆದಿದ್ದ ಶೂಟೌಟ್'ನಲ್ಲಿ ಹತ್ಯೆಗೀಡಾಗಿದ್ದ ಭಾರತ ಮೂಲದ ಶ್ರೀನಿವಾಸ್ ಕುಚಿಬೋಟ್ಲಾ ಅವರ ಮೃತ ದೇಹವನ್ನು ಸೋಮವಾರ ರಾತ್ರಿ...

ಹೈದರಾಬಾದ್: ಅಮೆರಿಕಾದ ಕನ್ಸಾಸ್ ನಗರದ ಬಾರೊಂದರಲ್ಲಿ ನಡೆದಿದ್ದ ಶೂಟೌಟ್'ನಲ್ಲಿ ಹತ್ಯೆಗೀಡಾಗಿದ್ದ ಭಾರತ ಮೂಲದ ಶ್ರೀನಿವಾಸ್ ಕುಚಿಬೋಟ್ಲಾ ಅವರ ಮೃತ ದೇಹವನ್ನು ಸೋಮವಾರ ರಾತ್ರಿ ಹೈದರಾಬಾದ್'ಗೆ ಕರೆ ತರಲಾಗಿದೆ. 
ಪಾರ್ಥೀವ ಶರೀರರವನ್ನು ಸ್ವೀಕಾರ ಮಾಡಲು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಶ್ರೀನಿವಾಸ್ ಪೋಷಕರು ಮಗನ ಶವವನ್ನು ಕಂಡು ದುಃಖಿತರಾದರು. ಏರ್ ಇಂಡಿಯಾ ವಿಮಾನದ ಮೂಲಕ ತರಲಾದ ಪಾರ್ಥೀವ ಶರೀರದ ಜೊತೆಗೆ ಶ್ರೀನಿವಾಸ್ ಪತ್ನಿ ಸುನಯನಾ ದುಮಲಾ ಮತ್ತು ಸಹೋರದ ಅವರು ಕೂಡ ಆಗಮಿಸಿದ್ದರು. 
ಶ್ರೀನಿವಾಸ್ ಅವರ ಅಂತಿಮ ಸಂಸ್ಕಾರದ ವಿಧಿವಿಧಾನಗಳನ್ನು ಸಕಲ ಸರ್ಕಾರ ಗೌರವಗಳೊಂದಿಗೆ ಇಂದು ನಡೆಯುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. 
ಇತ್ತೀಚೆಗಷ್ಟೇ ತಮ್ಮ ಸ್ನೇಹಿತರ ಜತೆಗೂಡಿ ಅಮೆರಿಕಾದ ಕನ್ಸಾಸ್ ನಗರದ ಬಾರ್ ವೊಂದಕ್ಕೆ ಶ್ರೀನಿವಾಸ್ ಅವರು ತೆರಳಿದ್ದರು. ಈ ವೇಳೆ ಅಮೆರಿಕಾದ ನೌಕಾಪಡೆಯ ನಿವೃತ್ತ ಯೋಧ ಅ್ಯಡಂ ಪ್ಯೂರಿಂಟನ್ ಎಂಬಾತ ಶ್ರೀನಿವಾಸ್ ಅವರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದ. ಅಲ್ಲದೆ, ಅಮೆರಿಕ ದೇಶವನ್ನು ಬಿಟ್ಟು ತೊಲಗಿ ಎಂದು ಕೂಗಾಡಿದ್ದ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT