ಅರವಿಂದ್ ಕೇಜ್ರಿವಾಲ್ 
ದೇಶ

ರಾಮಜಾಸ್ ಕಾಲೇಜು ವಿವಾದ: ಲೆಫ್ಟಿನೆಂಟ್ ಗೌರ್ನರ್ ನ್ನು ಭೇಟಿ ಮಾಡಲಿರುವ ಕೇಜ್ರಿವಾಲ್

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಫೆ.28 ರಂದು ಲೆಫ್ಟಿನೆಂಟ್ ಗೌರ್ನರ್ ಅನಿಲ್ ಬೈಜಾಲ್ ಅವರನ್ನು ಭೇಟಿ ಮಾಡಲಿದ್ದಾರೆ.

ನವದೆಹಲಿ: ದೆಹಲಿಯ ರಾಮಜಾಸ್ ಕಾಲೇಜಿನಲ್ಲಿ ಎಬಿವಿಪಿ ಹಾಗೂ ಎಐಎಸ್ಎ ವಿದ್ಯಾರ್ಥಿಗಳ ನಡುವಿನ ಸಂಘರ್ಷದ ವಿಷಯವಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಫೆ.28 ರಂದು ಲೆಫ್ಟಿನೆಂಟ್ ಗೌರ್ನರ್ ಅನಿಲ್ ಬೈಜಾಲ್ ಅವರನ್ನು ಭೇಟಿ ಮಾಡಲಿದ್ದಾರೆ. 
ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಕೇಜ್ರಿವಾಲ್, ಎಬಿವಿಪಿ  ವಿದ್ಯಾರ್ಥಿಗಳ ಸೂಚನೆಯಂತೆ ರಾಷ್ಟ್ರವಿರೋಧಿ ಘೋಷಣೆಗಳನ್ನು ಕೂಗಲಾಗಿದೆ ಎಂದು ಆರೋಪಿಸಿದ್ದು, ದೆಹಲಿ ವಿವಿ ವಿದ್ಯಾರ್ಥಿನಿಗೆ ಅತ್ಯಾಚಾರ ಬೆದರಿಕೆ ಹಾಕಲಾಗಿರುವ ಎಬಿವಿಪಿ ವಿದ್ಯಾರ್ಥಿ ಸಂಘಟನೆವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಲೆಫ್ಟಿನೆಂಟ್ ಗೌರ್ನರ್ ಗೆ ಮನವಿ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. 
1999 ರಲ್ಲಿ ಮೃತಪಟ್ಟ ಸೇನಾ ಕ್ಯಾಪ್ಟನ್ ಪುತ್ರಿ ಗುರ್ ಮೆಹರ್ ಕೌರ್ ದೆಹಲಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಯಾಗಿದ್ದು, ರಾಮಜಾಸ್ ಕಾಲೇಜಿನ ಪ್ರಕರಣದ ನಂತರ ಎಬಿವಿಪಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಪ್ರಾರಂಭಿಸಿದ್ದರು. ಅಭಿಯಾನ ಪ್ರಾರಂಭವಾದ ನಂತರ ನನಗೆ ಹತ್ಯೆ ಹಾಗೂ ಅತ್ಯಾಚಾರದ ಆರೋಪ ಕೇಳಿಬರುತ್ತಿದೆ ಎಂದು ಗುರ್ ಮೆಹರ್ ಕೌರ್ ಆರೋಪಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT