ತಾರಕ್ ಮೆಹ್ತಾ (ಸಂಗ್ರಹ ಚಿತ್ರ) 
ದೇಶ

ಖ್ಯಾತ ಅಂಕಣಕಾರ, ಹಾಸ್ಯ ಲೇಖಕ, ನಾಟಕಕಾರ ತಾರಕ್ ಮೆಹ್ತಾ ನಿಧನ

ಭಾರತದ ಖ್ಯಾತ ಅಂಕಣಕಾರ, ಹಾಸ್ಯ ಲೇಖಕ ಹಾಗೂ ನಾಟಕಕಾರ ತಾರಕ್ ಮೆಹ್ತಾ ಅವರು ಬುಧವಾರ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಅವರಿಗೆ 87 ವರ್ಷ ವಯಸ್ಸಾಗಿತ್ತು.

ಅಹ್ಮದಾಬಾದ್: ಭಾರತದ ಖ್ಯಾತ ಅಂಕಣಕಾರ, ಹಾಸ್ಯ ಲೇಖಕ ಹಾಗೂ ನಾಟಕಕಾರ ತಾರಕ್ ಮೆಹ್ತಾ ಅವರು ಬುಧವಾರ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಅವರಿಗೆ 87 ವರ್ಷ ವಯಸ್ಸಾಗಿತ್ತು.

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ತಾರಕ್ ಮೆಹ್ತಾ ಅವರು ಇಂದು ನಿಧನರಾಗಿದ್ದು, ಅವರ ನಿಧನಕ್ಕೆ ಖ್ಯಾತ ಪತ್ರಕರ್ತರು, ರಾಜಕಾರಣಿಗಳು ಕಂಬನಿ ಮಿಡಿದಿದ್ದಾರೆ. ತಮ್ಮ ಹಾಸ್ಯ ಲೇಖನ ಮತ್ತು ವಿಡಂಬನಾತ್ಮಕ  ಅಂಕಣಗಳಿಂದ ಖ್ಯಾತಿ ಗಳಿಸಿದ್ದ ತಾರಕ್ ಮೆಹ್ತಾ ಅವರು ಗುಜರಾತ್  ಭಾಷೆಯಲ್ಲಿ ಬರೆದಿದ್ದ ಅಂಕಣವನ್ನು ಆಧರಿಸಿ 2008ರಲ್ಲಿ ಸಬ್ ಟಿವಿಯಲ್ಲಿ ‘ತಾರಕ್ ಮೆಹ್ತಾ ಕಾ ಉಲ್ಟಾ ಚಷ್ಮಾ’ ಎಂಬ ಕಾರ್ಯಕ್ರಮ ಪ್ರಸಾರವಾಗಿತ್ತು. ಈ  ಕಾರ್ಯಕ್ರಮದಿಂದಾಗಿ ಚಾನಲ್‌ಗೆ ಭಾರೀ ಖ್ಯಾತಿ ಗಳಿಸಿತ್ತು. ಸಾಮಾನ್ಯ ಸಾಮಾಜಿಕ ಬೆಳವಣಿಗೆಗಳು ಹಾಗೂ ಜನಜೀವನದಲ್ಲಿನ ಸಣ್ಣ ಬದಲಾವಣೆಗಳನ್ನು ತಮ್ಮ ಹಾಸ್ಯ ಬರವಣಿಗೆ ಮೂಲಕ ತಾರಕ್ ಮೆಹ್ತಾ ವಿಡಂಬನೆ  ಮಾಡುತ್ತಿದ್ದರು.

2015ರಲ್ಲಿ ತಾರಕ್ ಮೆಹ್ತಾ ಅವರಿಗೆ ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿದ ಅಪಾರ ಸೇವೆಗಾಗಿ ಪದ್ಮಶ್ರೀ ಪ್ರಶಸ್ತಿ ಕೂಡ ನೀಡಿ ಗೌರವಿಸಲಾಗಿತ್ತು. ಮೃತರು ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಇದೇ ಕಾರಣಕ್ಕೆ ಸಬ್ ಟಿವಿ ಕಾರ್ಯಕ್ರಮ ಯಶಸ್ಸು ಸಾಧಿಸಿತ್ತು. ತಾರಕ್ ಮೆಹ್ತಾ ಖ್ಯಾತ ಪತ್ರಿಕೆಗಳಾದ ದಿವ್ಯ ಭಾಸ್ಕರ್, ಚಿತ್ರಲೇಖಾದಂತಹ ಖ್ಯಾತ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದರು. ಕಳೆದ 16 ವರ್ಷಗಳಿಂದ ಗುಜರಾತ್  ಅಹ್ಮದಾಬಾದ್ ನಲ್ಲಿ ನೆಲೆಸಿದ್ದರು. ಮೆಹ್ತಾ ನಿಧನಕ್ಕೆ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶೋಕ ವ್ಯಕ್ತಪಡಿಸಿದ್ದು, "ಗುಜರಾತ್‌ನ ಲೇಖಕ ಹಾಗೂ ಪದ್ಮಶ್ರೀ ಪುರಸ್ಕೃತ ತಾರಕ್ ಮೆಹ್ತಾ ನಿಧನದ ಸುದ್ದಿ ಕೇಳಿ ಆಘಾತವಾಯಿತು.  ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT