ನರೇಂದ್ರ ಮೋದಿ 
ದೇಶ

ಉತ್ತರ ಪ್ರದೇಶದಲ್ಲಿ 14 ವರ್ಷಗಳ ಅಭಿವೃದ್ಧಿ ವನವಾಸ ಅಂತ್ಯವಾಗಲಿದೆ: ಪ್ರಧಾನಿ ಮೋದಿ

ಉತ್ತರ ಪ್ರದೇಶದಲ್ಲಿ 14 ವರ್ಷಗಳ ಬಿಜೆಪಿ ವನವಾಸ ಈ ಬಾರಿ ಅಂತ್ಯವಾಗಲಿದೆ. ಬಿಜೆಪಿ ವನವಾಸ ಮಾತ್ರವಲ್ಲ. ಅಭಿವೃದ್ಧಿಯ ವನವಾಸಕ್ಕೂ...

ಲಖನೌ: ಉತ್ತರ ಪ್ರದೇಶದಲ್ಲಿ 14 ವರ್ಷಗಳ ಬಿಜೆಪಿ ವನವಾಸ ಈ ಬಾರಿ ಅಂತ್ಯವಾಗಲಿದೆ. ಬಿಜೆಪಿ ವನವಾಸ ಮಾತ್ರವಲ್ಲ. ಅಭಿವೃದ್ಧಿಯ ವನವಾಸಕ್ಕೂ ಮುಕ್ತಿ ಸಿಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಹೇಳಿದ್ದಾರೆ.
ಇಂದು ಲಖನೌನಲ್ಲಿ ಪರಿವರ್ತನ್ ರ್ಯಾಲಿ ಉದ್ದೇಶಿಸಿ ಮಾತನಾಡಿದ ಮೋದಿ, ಹಿಂದುಸ್ಥಾನದ ಭಾಗ್ಯವನ್ನು ಬದಲಾಯಿಸಲು ನಾವು ಮೊದಲು ಉತ್ತರ ಪ್ರದೇಶದ ಭಾಗ್ಯವನ್ನು ಬದಲಾಯಿಸಬೇಕು. ಆದರೆ ಉತ್ತರ ಪ್ರದೇಶ 14 ವರ್ಷಗಳಿಂದ ಅಭಿವೃದ್ಧಿಯ ವನವಾಸವನ್ನು ಅನುಭವಿಸುತ್ತಿದೆ. ಕೆಲವರು ಬಿಜೆಪಿ 14 ವರ್ಷಗಳ ವನವಾಸ ಅಂತ್ಯಗೊಳ್ಳುತ್ತದೆ ಎನ್ನುತ್ತಿದ್ದಾರೆ. ಆದರೆ ಇದು ಬಿಜೆಪಿಯ ವನವಾಸವಲ್ಲ, ಉತ್ತರ ಪ್ರದೇಶದ ಅಭಿವೃದ್ಧಿಯ ವನವಾಸ ಎಂದರು. ಅಲ್ಲದೆ ರಾಜ್ಯದ ಅಭಿವೃದ್ಧಿಗಾಗಿ ಜಾತಿ, ಧರ್ಮ ಬದಿಗಿಟ್ಟು ಈ ಬಾರಿ ಬಿಜೆಪಿಗೆ ಮತ ನೀಡುವಂತೆ ಕರೆ ನೀಡಿದರು.
ಎಸ್​ಪಿ ಮತ್ತು ಬಿಎಸ್​ಪಿ ಎಂದಾದರೂ ಒಂದಾದದ್ದನ್ನು ನೀವು ಕಂಡಿದ್ದೀರಾ? ಇಷ್ಟೊಂದು ವರ್ಷಗಳಲ್ಲಿ ಒಂದು ವಿಷಯಕ್ಕೆ ಸಂಬಂಧಿಸಿದಂತೆ ಇವರಿಬ್ಬರೂ ಒಂದಾಗಿದ್ದಾರೆ, ಮೋದಿಯನ್ನು ಬದಲಾಯಿಸಿ ಎಂದು ಹೇಳುತ್ತಿದ್ದಾರೆ. ನಾನು ಭ್ರಷ್ಟಾಚಾರವನ್ನು ತೊಲಗಿಸಿ ಎಂದು ಹೇಳುತ್ತಿದ್ದೇನೆ, ಇವರು ಮೋದಿಯನ್ನು ತೊಲಗಿಸಿ ಎಂದು ಹೇಳುತ್ತಿದ್ದಾರೆ. ನಾನು ಕಾಳಧನವನ್ನು ತೊಲಗಿಸಿ ಎಂದು ಹೇಳುತ್ತಿದ್ದೇನೆ, ಇವರು ಮೋದಿಯನ್ನು ತೊಲಗಿಸಿ ಎಂದು ಹೇಳುತ್ತಿದ್ದಾರೆ. ಯಾವುದನ್ನು ತೊಲಗಿಸಬೇಕು ಎಂದು ನೀವೇ ನಿರ್ಧರಿಸಿ ಎಂದು ಪ್ರಧಾನಿ ಜನತೆಗೆ ಹೇಳಿದರು.
ಇದೇ ವೇಳೆ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ. ಕೇಂದ್ರ ಸರ್ಕಾರ ಭತ್ತ ಖರೀದಿಗಾಗಿ ಎಲ್ಲಾ ರೀತಿಯ ಸಹಾಯ ನೀಡಿದೆ. ಆದರೂ ಉತ್ತರ ಪ್ರದೇಶ ಸರ್ಕಾರ ರೈತರಿಂದ ಭತ್ತ ಖರೀದಿಸಿಲ್ಲ ಎಂದು ಆರೋಪಿಸಿದರು.
ಮೋದಿ ಅವರಿಗಿಂತ ಮೊದಲ ಗೃಹ ಸಚಿವ ರಾಜನಾಥ್ ಸಿಂಗ್, ಪಕ್ಷಾಧ್ಯಕ್ಷ ಅಮಿತ್ ಷಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT