ಸಾಂದರ್ಭಿಕ ಚಿತ್ರ 
ದೇಶ

ಬಿಹಾರ: ಗುಂಡಿಟ್ಟು ಪತ್ರಕರ್ತನ ಬರ್ಬರ ಹತ್ಯೆ

ಬಂದೂಕು ಹಿಡಿದು ಬಂದಿದ್ದ ದುಷ್ಕರ್ಮಿಗಳ ಗುಂಪೊಂದು ಪತ್ರಕರ್ತನನ್ನು ಗುಂಡಿಟ್ಟು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯೊಂದು ಬಿಹಾರದ ಸಮಸ್ತಿಪುರ ಜಿಲ್ಲೆಯ ಸಲ್ಖಾನಿ ಗ್ರಾಮದಲ್ಲಿ...

ಪಾಟ್ನ: ಬಂದೂಕು ಹಿಡಿದು ಬಂದಿದ್ದ ದುಷ್ಕರ್ಮಿಗಳ ಗುಂಪೊಂದು ಪತ್ರಕರ್ತನನ್ನು ಗುಂಡಿಟ್ಟು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯೊಂದು ಬಿಹಾರದ ಸಮಸ್ತಿಪುರ ಜಿಲ್ಲೆಯ ಸಲ್ಖಾನಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಸಮಸ್ತಿಪುರದಿಂದ 40 ಕಿ.ಮೀ. ದೂರದಲ್ಲಿರುವ ಸಲ್ಖಾನಿ ಗ್ರಾಮದಲ್ಲಿ ಘಟನೆ ನಡೆದಿದೆ. ಹಿಂದಿಯ ಪ್ರಮುಖ ಪತ್ರಿಕೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಬ್ರಜ್ ಕುಮಾರ್ ಸಿಂಗ್ ಹತ್ಯೆಯಾದ ಪತ್ರಕರ್ತರಾಗಿದ್ದಾರೆ. ಹತ್ಯೆಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. ಆರೋಪಿಗಳು ತಲೆಮರೆಸಿಕೊಂಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ತನಿಖೆ ಆರಂಭಿಸಿದ್ದಾರೆ.

ಈ ಹಿಂದೆ 2016 ನವೆಂಬರ್ ತಿಂಗಳಿನಲ್ಲಿ ಖ್ಯಾತ ಪ್ರಾದೇಶಿಕ ಪತ್ರಿಕೆಯ ಪತ್ರಕರ್ತ ಧರ್ಮೇಂದ್ರ ಸಿಂಗ್ ಎಂಬುವವರನ್ನು ಹತ್ಯೆ ಮಾಡಲಾಗಿತ್ತು. ಹಿಂದಿ ದಿನಪತ್ರಿಕೆಯ ಹಿಂದೂಸ್ತಾನ್ ಸಿವನ್ ಬ್ಯೂರೋ ಮುಖ್ಯಸ್ಥ ರಾಜೇಡೋ ರಂಜನ್ ಅವರನ್ನು ಸಿವಾನ್ ಜಿಲ್ಲೆಯಲ್ಲಿ 2016 ಮೇ ತಿಂಗಳಿನಲ್ಲಿ ಹತ್ಯೆ ಮಾಡಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT