ಸಂಗ್ರಹ ಚಿತ್ರ 
ದೇಶ

ಅರುಣಾಚಲಪ್ರದೇಶ, ಮ್ಯಾನ್ಮಾರ್ ಗಡಿಯಲ್ಲಿ ಭೂಕಂಪನ: 5.4ರಷ್ಟು ತೀವ್ರತೆ ದಾಖಲು

ಅರುಣಾಚಲಪ್ರದೇಶ, ಭಾರತ-ಮ್ಯಾನ್ಯಾರ್ ಗಡಿ ಭಾಗ ಸೇರಿದಂತೆ ಈಶಾನ್ಯ ಭಾಗದ ಹಲವೆಡೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.4ರಷ್ಟು ತೀವ್ರತೆ ದಾಖಲಾಗಿದೆ ಎಂದು ಬುಧವಾರ...

ಇಟಾನಗರ: ಅರುಣಾಚಲಪ್ರದೇಶ, ಭಾರತ-ಮ್ಯಾನ್ಯಾರ್ ಗಡಿ ಭಾಗ ಸೇರಿದಂತೆ ಈಶಾನ್ಯ ಭಾಗದ ಹಲವೆಡೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.4ರಷ್ಟು ತೀವ್ರತೆ ದಾಖಲಾಗಿದೆ ಎಂದು ಬುಧವಾರ ತಿಳಿದುಬಂದಿದೆ.

ಭಾರತ ಮತ್ತು ಮ್ಯಾನ್ಮಾರ್ ಗಡಿ ಭಾಗದಲ್ಲಿ ತಡರಾತ್ರಿ 12.20 ಸುಮಾರಿಗೆ ಭೂಕಂಪನವಾಗಿರುವುದಾಗಿ ರಾಷ್ಟ್ರೀಯ ಭೂಕಂಪ ಸಂಶೋಧನಾ ಕೇಂದ್ರ ಮಾಹಿತಿ ನೀಡಿದೆ.

ಅರುಣಾಚಲಪ್ರದೇಶದ ಕುರುಂಗ್ ಕುಮೇ ಜಿಲ್ಲೆಯಲ್ಲಿ ಬೆಳಗಿನ ಜಾವ 1:02 ಸುಮಾರಿಗ ಭೂಕಂಪನದ ಅನುಭವವಾಗಿದ್ದು, ರಿಕ್ಟರ್ ಮಾಪಕದಲ್ಲಿ 4.3ರಷ್ಟು ತೀವ್ರತೆ ದಾಖಲಾಗಿದೆ. ಇದಲ್ಲದೆ, ಅಸ್ಸಾಂ, ಮೇಘಾಲಯ, ಮಿಜೋರಾಂ, ತ್ರಿಪುರ, ನಾಗಾಲ್ಯಾಂಡ್, ಮಣಿಪುರದಲ್ಲಿ ಭೂಕಂಪನದ ಅನುಭವವಾಗಿರುವುದಾಗಿ ತಿಳಿದುಬಂದಿದೆ.

ಆಗರ್ತಲಾದಿಂದ 59 ಕಿ.ಮೀ ದೂರದಲ್ಲಿರುವ ಅಂಬಾಸಾ ಎಂಬ ಪ್ರದೇಶದಲ್ಲಿ ಭೂಕಂಪನದ ಕೇಂದ್ರ ಭಾಗ ಕಂಡುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT