ಟಿಎಂಸಿ ಸಂಸದರನ್ನು ವಶಕ್ಕೆ ಪಡೆಯುತ್ತಿರುವ ಪೊಲೀಸರು 
ದೇಶ

ಸುದೀಪ್ ಬಂಧನ ಖಂಡಿಸಿ ಪ್ರಧಾನಿ ನಿವಾಸ ಮುತ್ತಿಗೆಗೆ ಯತ್ನಿಸಿದ ಟಿಎಂಸಿ ಸಂಸದರ ವಶಕ್ಕೆ

ರೋಸ್ ವ್ಯಾಲಿ ಹಗರಣಕ್ಕೆ ಸಂಬಂಧಿಸಿದಂತೆ ಲೋಕಸಭೆ ತೃಣಮೂಲ ಕಾಂಗ್ರೆಸ್ ನಾಯಕ ಸುದೀಪ್ ಬಂಡೋಪಧ್ಯಾಯ ಅವರ...

ನವದೆಹಲಿ: ರೋಸ್ ವ್ಯಾಲಿ ಹಗರಣಕ್ಕೆ ಸಂಬಂಧಿಸಿದಂತೆ ಲೋಕಸಭೆ ತೃಣಮೂಲ ಕಾಂಗ್ರೆಸ್ ನಾಯಕ ಸುದೀಪ್ ಬಂಡೋಪಧ್ಯಾಯ ಅವರ ಬಂಧನ ಖಂಡಿಸಿ ಬುಧವಾರ ಟಿಎಂಸಿ ಸಂಸದರು ಪ್ರಧಾನಿ ನರೇಂದ್ರ ಮೋದಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.
ಪ್ರತಿಭಟನಾ ಮೆರವಣಿ ಮೂಲಕ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನಿವಾಸಕ್ಕೆ ತೆರಳುತ್ತಿದ್ದ ಪಶ್ಚಿಮ ಬಂಗಾಳದ ಆಡಳಿತರೂಢ ಪಕ್ಷದ ಸಂಸದರನ್ನು ಪೊಲೀಸರು ಮಧ್ಯದಲ್ಲಿಯೇ ತಡೆದು, ವಶಕ್ಕೆ ಪಡೆದರು. 
ಈ ವೇಳೆ ಮಾತನಾಡಿದ ಟಿಎಂಸಿ ನಾಯಕ ಸೌಗತ ರಾಯ್ ಅವರು, ನಾವು ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದೇವೆ. ಆದರೂ ನಮ್ಮನ್ನು ಮಧ್ಯದಲ್ಲಿಯೇ ತಡೆದ ಪೊಲೀಸರು, ಕೆಲವು ಸಂಸದರನ್ನು ಎಳೆದಾಡಿ, ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಪ್ರತಿಭಟನಾ ಮೆರವಣಿಗೆಯಲ್ಲಿ ಟಿಎಂಸಿಯ 36 ಸಂಸದರು ಭಾಗವಹಿಸಿದ್ದರು ಎಂದಿರುವ ರಾಯ್, ಮೋದಿ ಸರ್ಕಾರದ ಅನ್ಯಾಯದ ವಿರುದ್ಧ ನಮ್ಮ ಪ್ರತಿಭಟನೆ ಮುಂದುವರೆಯಲಿದೆ ಎಂದು ಹೇಳಿದ್ದಾರೆ.
ರೋಸ್ ವ್ಯಾಲಿ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ತೃಣಮೂಲ ಕಾಂಗ್ರೆಸ್ ನ ಮತ್ತೊಬ್ಬ ಸಂಸದ ಸುದೀಪ್ ಬಂಡೋಪಧ್ಯಾಯ ಅವರನ್ನು ಮಂಗಳವಾರ ಬಂಧಿಸಿದೆ. ಇದೆ ಪ್ರಕರಣ ಸಂಬಂಧ ಸಿಬಿಐ ಡಿಸೆಂಬರ್ 3ರಂದು ಟಿಎಂಸಿ ಸಂಸದ ತಪಸ್ ಪಾಲ್ ಅವರನ್ನು ಬಂಧಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?